ಶಂಕರ್ ಮತ್ತು ಅವರ ಕುಟುಂಬ ಕೊಪ್ಪಳದ ಕಾರಟಗಿ ಗ್ರಾಮದಲ್ಲಿ ಹಿಂದೂ ಧರ್ಮಕ್ಕೆ ಮರಳಿದರು. 
ರಾಜ್ಯ

ಘರ್ ವಾಪಸಿ: ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ಸಾದ ಕುಟುಂಬ!

ಮುಂಬರುವ ವಿಧಾನಸಭೆ ಚುನಾವಣೆ ವೇಳೆಗೆ ಮತಾಂತರ ವಿರೋಧಿ ಮಸೂದೆ ಮಂಡನೆಗೆ ರಾಜ್ಯ ಸರ್ಕಾರ ಕಸರತ್ತು ನಡೆಸುತ್ತಿರುವ ನಡುವಲ್ಲೇ ಕೊಪ್ಪಳ ಜಿಲ್ಲೆಯ ಕಾರಟಗಿ ಗ್ರಾಮದಲ್ಲಿ ಘರ್ ವಾಪ್ಸಿ ಮಾಡಿರುವ ಘಟನೆಯೊಂದು ನಡೆದಿದೆ.

ಕೊಪ್ಪಳ: ಮುಂಬರುವ ವಿಧಾನಸಭೆ ಚುನಾವಣೆ ವೇಳೆಗೆ ಮತಾಂತರ ವಿರೋಧಿ ಮಸೂದೆ ಮಂಡನೆಗೆ ರಾಜ್ಯ ಸರ್ಕಾರ ಕಸರತ್ತು ನಡೆಸುತ್ತಿರುವ ನಡುವಲ್ಲೇ ಕೊಪ್ಪಳ ಜಿಲ್ಲೆಯ ಕಾರಟಗಿ ಗ್ರಾಮದಲ್ಲಿ ಘರ್ ವಾಪ್ಸಿ ಮಾಡಿರುವ ಘಟನೆಯೊಂದು ನಡೆದಿದೆ.

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ಹಿಂದೂ ಕುಟುಂಬವೊಂದು ಮತ್ತೆ ತಮ್ಮ ಮೂಲ ಧರ್ಮಕ್ಕೆ ಹಿಂದಿರುಗಿದ್ದಾರೆ.

ಆರ್ಥಿಕ ಹಿನ್ನಲೆಯಲ್ಲಿ ನಾಲ್ಕು ವರ್ಷಗಳ ಹಿಂದೆ ಕುಟುಂಬವೊಂದು ಬಲವಂತವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿತ್ತು. ಇದೀಗ ಕುಟುಂಬ ಸದಸ್ಯರ ಆಶಯದಂತೆ ಹಿಂದೂ ಜಾಗರಣ ವೇದಿಕೆಯು ಕಾರಟಗಿ ಗ್ರಾಮದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿ ಕುಟುಂಬವನ್ನು ಮೂಲ ಧರ್ಮಕ್ಕೆ ಹಿಂತಿರುಗುವಂತೆ ಮಾಡಿದ್ದಾರೆ.

ಹಿಂದೂ ಜಾಗರಣ ವೇದಿಕೆಯನ್ನು ಸಂಪರ್ಕಿಸಿದ ಕೊಪ್ಪಳದ ಶಂಕರ್ ಕೆ, ಕ್ರೈಸ್ತ ಧರ್ಮವನ್ನು ಸ್ವೀಕರಿಸಲು ನನಗೆ ಸಂತೋಷವಿಲ್ಲ. "ಮತಾಂತರವು ನನಗೆ ಅಥವಾ ನನ್ನ ಕುಟುಂಬ ಸದಸ್ಯರಿಗೆ ಸಹಾಯ ಮಾಡಲಿಲ್ಲ. ನಮ್ಮನ್ನು ಚೆನ್ನಾಗಿ ನಡೆಸಿಕೊಳ್ಳಲಾಗಿಲ್ಲ. ಹಲವು ವರ್ಷಗಳಿಂದ ಒತ್ತಡದಲ್ಲಿದ್ದೆವು. ಹಲವು ದಿನಗಳಿಂದಲೂ ದೇವರ ಕನಸ್ಸುಗಳು ಬರುತ್ತಲೇ ಇದೆ. ಆದ್ದರಿಂದ ಹಿಂದೂ ಧರ್ಮಕ್ಕೆ ಮರಳಲು ಬಯಸುತ್ತಿದ್ದೇನೆಂದು ಹೇಳಿದ್ದಾರೆ.

ಶಂಕರ್ ಮತ್ತು ಅವರ ಕುಟುಂಬ ಬುಡಗ ಜಂಗಮ ಎಂಬ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಿಂದೂ ಧರ್ಮಕ್ಕೆ ಮರಳಿರುವ ಹಿನ್ನೆಲೆಯಲ್ಲಿ ಇದೀಗ ಶಂಕರ್ ಹಾಗೂ ಕುಟುಂಬವು ಜಾತಿ ಹೆಸರು ಬದಲಾವಣೆ ಕೋರಿ ಸ್ಥಳೀಯ ಸರಕಾರಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಲಿದ್ದಾರೆ. ಮತಾಂತರಗೊಂಡವರು ಈ ಕುರಿತು ಕೊಪ್ಪಳದ ತಹಶೀಲ್ದಾರ್ ಕಚೇರಿಗೆ ಮಾಹಿತಿ ನೀಡುವುದು ಪ್ರಮುಖವಾಗಿದೆ.

"ನಾನು ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ ಅಥವಾ ಯಾವುದೇ ಹಿಂದೂ ಸಂಘಟನೆಗಳು ನನ್ನನ್ನು ಸಂಪರ್ಕಿಸಿಲ್ಲ. ನನಗೆ ಬೆದರಿಕೆ ಹಾಕಿದ್ದಕ್ಕಾಗಿ ಮತ್ತು ನಮ್ಮ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪಾದ್ರಿ ಮತ್ತು ಅವರ ಕುಟುಂಬದ ವಿರುದ್ಧ ನಾನು ಪೊಲೀಸ್ ದೂರು ದಾಖಲಿಸಿದ್ದೇನೆ. ದೂರಿನ ನಂತರ, ಪಾದ್ರಿ ಮತ್ತು ಅವರ ಕುಟುಂಬ ಅವರು ತಲೆಮರೆಸಿಕೊಂಡಿದ್ದಾರೆ. ನಂತರ ನಾನು ನನ್ನ ಕುಟುಂಬದ ಒಳಿತಿಗಾಗಿ ಹಿಂದೂ ಧರ್ಮಕ್ಕೆ ಮರಳಲು ನಿರ್ಧರಿಸಿದೆ. ನನಗೆ ಮತ್ತು ನನ್ನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಅಧಿಕಾರಿಗಳನ್ನು ಕೋರುತ್ತೇನೆ" ಎಂದು ಶಂಕರ್ ಹೇಳಿದ್ದಾರೆ.

"ಅವರ ಇಚ್ಛೆಯಂತೆ, ನಾವು ಸ್ಥಳೀಯ ದೇವಾಲಯದ ಅಧಿಕಾರಿಗಳ ಸಹಾಯದಿಂದ ಧಾರ್ಮಿಕ ಕ್ರಿಯೆಗಳನ್ನು ಆಯೋಜಿಸಿದ್ದೆವು, ಇದಾದ ನಂತರ ಬೇರೆ ಧರ್ಮಕ್ಕೆ ಹಿಂತಿರುಗುವುದಿಲ್ಲ ಎಂದು ಕುಟುಂಬದವರು ಲಿಖಿತ ರೂಪದಲ್ಲಿ ಬರೆದುಕೊಂಡಿದ್ದಾರೆ.

ಸದ್ಯಕ್ಕೆ ಕುಟುಂಬದ ಐವರು ಹಿಂದೂ ಧರ್ಮಕ್ಕೆ ಮರಳಲು ನಿರ್ಧರಿಸಿದ್ದಾರೆ. ಮುಂದಿನ ತಿಂಗಳು ಕುಟುಂಬದ ಇನ್ನೂ ಮೂವರು ಸದಸ್ಯರು ಹಿಂದೂ ಧರ್ಮಕ್ಕೆ ಮರಳಲಿದ್ದಾರೆ ಎಂದು ಕಾರಟಗಿಯ ಹಿಂದೂ ಜಾಗರಣ ವೇದಿಕೆಯ ಸದಸ್ಯರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT