ಸಂಗ್ರಹ ಚಿತ್ರ 
ರಾಜ್ಯ

ಗ್ರಾಮಗಳಲ್ಲಿ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಮುಂದು!

ರಾಜ್ಯದ ಗ್ರಾಮಗಳಲ್ಲಿ ಹಂತ ಹಂತವಾಗಿ ನ್ಯಾಯಾಲಯಗಳ ಸ್ಥಾಪಸಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಬೆಂಗಳೂರು: ರಾಜ್ಯದ ಗ್ರಾಮಗಳಲ್ಲಿ ಹಂತ ಹಂತವಾಗಿ ನ್ಯಾಯಾಲಯಗಳ ಸ್ಥಾಪಸಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಕುರಿತು ನಿನ್ನೆಯಷ್ಟೇ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳು ಮತ್ತು ಹೈಕೋರ್ಟ್‌ಗಳಿಂದ ಮಾಹಿತಿ ಕೇಳಿತ್ತು.  ನ್ಯಾಯಾಲಯಗಳನ್ನು ಗ್ರಾಮ ಮಟ್ಟಕ್ಕೆ ಕೊಂಡೊಯ್ಯುವುದು ಈ ಉಪಕ್ರಮದ ಉದ್ದೇಶವಾಗಿದೆ.

ಈ ಕುರಿತು ಇತ್ತೀಚೆಗೆ ನಡೆದ ಅಖಿಲ ಭಾರತ ಕಾನೂನು ಸಚಿವರ ಸಭೆಯಲ್ಲಿ ಚರ್ಚೆಗಳು ನಡೆದಿದ್ದು, ರಾಜ್ಯವು ಈ ಉಪಕ್ರಮವನ್ನು ಬೆಂಬಲಿಸಿದೆ ಎಂದು ಕರ್ನಾಟಕ ಕಾನೂನು ಸಚಿವ ಜೆ ಸಿ ಮಾದುಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.

ರಾಜ್ಯಾದ್ಯಂತ ಅಗತ್ಯವಿರುವ ಕಡೆ ಗ್ರಾಮಗಳಲ್ಲಿ ಹಂತ ಹಂತವಾಗಿ ಗ್ರಾಮ ನ್ಯಾಯಾಲಯಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ತಿಳಿಸಿದರು.

ಗ್ರಾಮಗಳಲ್ಲಿ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸುವ ದಕ್ಷರನ್ನು ಗುರುತಿಸುವ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕವು ನ್ಯಾಯಾಲಯಗಳನ್ನು ಸ್ಥಾಪಿಸಿದ ನಂತರ, ನ್ಯಾಯಾಂಗ ಸೇವೆಯನ್ನು ತಳಮಟ್ಟದವರೆಗೆ ಕೊಂಡೊಯ್ದ ದೇಶದ ಕೆಲವು ರಾಜ್ಯಗಳ ಪಟ್ಟಿಗೆ ಸೇರಲಿದೆ. ಈ ದಿಕ್ಕಿನಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಕೇರಳ, ಮಹಾರಾಷ್ಟ್ರ ಮತ್ತು ಒಡಿಶಾ ರಾಜ್ಯಗಳು ಪ್ರಗತಿ ಸಾಧಿಸಿವೆ ಎಂದು ಮಾಹಿತಿ ನೀಡಿದರು.

ಈ ಪ್ರಸ್ತಾವನೆಯನ್ನು ಕಾರ್ಯಗತಗೊಳಿಸುವ ಮಾರ್ಗಗಳ ಕುರಿತು ಚರ್ಚಿಸಲು ಕರ್ನಾಟಕವು ನ್ಯಾಯಮೂರ್ತಿಗಳಾದ ದಿನೇಶ್ ಕುಮಾರ್, ಪ್ರಭಾಕರ ಶಾಸ್ತ್ರಿ, ಎಸ್.ಅಮರಣ್ಣನವರ್ ಮತ್ತು ಎಸ್.ರಾಚಯ್ಯ ಅವರನ್ನು ಒಳಗೊಂಡ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ಉದ್ದೇಶಕ್ಕಾಗಿ ಸರ್ಕಾರವೂ 25 ಲಕ್ಷ ರೂಪಾಯಿಯನ್ನು ಮೀಸಲಿಟ್ಟಿದೆ. ಪ್ರತಿ ಹಳ್ಳಿಯಲ್ಲಿ ನ್ಯಾಯಾಂಗ ಅಧಿಕಾರಿಯನ್ನು ನೇಮಿಸುವ ಪ್ರಕ್ರಿಯೆಯು ಇದು ಒಳಗೊಂಡಿರುತ್ತದೆ. ಗ್ರಾಮಗಳಲ್ಲಿ ನ್ಯಾಯಾಲಯಗಳು ಸ್ಥಾಪನೆಗೊಂಡಿಡಿದ್ದೇ ಆದರೆ, ಕಾನೂನು ಸಮಸ್ಯೆಗಳಿಗೆ ಇಲ್ಲಿನ ಜನರು ಜಿಲ್ಲೆಯ ದೊಡ್ಡ ಪೀಠಗಳಿಗೆ ಹೋಗಬೇಕಾಗುವುದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT