ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಅಮಿತ್ ಶಾ ಸೂಚನೆ ಬಳಿಕವೂ 'ಮಹಾಮೇಳಾವ' ನಡೆಸಲು ಎಂಇಎಸ್ ಮುಂದು!

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನವರೆಗೆ ಕಾಯುವಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೂಚನೆ ನೀಡಿದ್ದರೂ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮಹಾಮೇಳಾವವನ್ನು ಮುಂದುವರಿಸಲು ನಿರ್ಧರಿಸಿದೆ.

ಬೆಳಗಾವಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನವರೆಗೆ ಕಾಯುವಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೂಚನೆ ನೀಡಿದ್ದರೂ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮಹಾಮೇಳಾವವನ್ನು ಮುಂದುವರಿಸಲು ನಿರ್ಧರಿಸಿದೆ.

ಬೆಳಗಾವಿಯಲ್ಲಿ ವಿಧಾನಸಭೆಯ ಚಳಿಗಾಲ ಅಧಿವೇಶನ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಇದಕ್ಕೆ ಪ್ರತಿಯಾಗಿ ಎಂಇಎಸ್ ಮಹಾಮೇಳಾವವನ್ನು ನಡೆಸುತ್ತಿದೆ. ಈ ಮಹಾಮೇಳಾವದಲ್ಲಿ ಕರ್ನಾಟಕದ ಹಲವಾರು ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸುವಂತೆ ಒತ್ತಾಯಿಸಲಾಗುತ್ತದೆ.

ಬೆಳಗಾವಿ, ನಿಪಾಣಿ, ಖಾನಾಪುರ, ಬೀದರ್, ಭಾಲ್ಕಿ ಸೇರಿದಂತೆ ಗಡಿಭಾಗದಲ್ಲಿರುವ ಕರ್ನಾಟಕದ ಹಲವು ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸುವುದು ಇದರ ಉದ್ದೇಶವಾಗಿದೆ.

“ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ಮಹಾಮೇಳವನ್ನು ನಡೆಸಲು ನಾವು ದೃಢವಾಗಿದ್ದೇವೆ. ಕರ್ನಾಟಕ ಬೆಳಗಾವಿಯಲ್ಲಿ 10 ದಿನಗಳ ಚಳಿಗಾಲದ ಅಧಿವೇಶನ ನಡೆಸುತ್ತಿರುವಾಗ ನಾವೇಕೆ ಸಮಾನಾಂತರ ಅಧಿವೇಶನ ನಡೆಸಬಾರದು ಎಂದು ಎಂಇಎಸ್‌ನ ಉನ್ನತ ನಾಯಕ ಹಾಗೂ ಮಾಜಿ ಶಾಸಕ ಮನೋಹರ್ ಕಿಣೇಕರ್ ಪ್ರಶ್ನಿಸಿದ್ದಾರೆ.

ಸಮಾನಾಂತರ ಅಧಿವೇಶನವನ್ನು ನಡೆಸುವುದು ನ್ಯಾಯಾಂಗ ನಿಂದನೆಗೆ ಸಮಾನವಾದರೆ, ಚಳಿಗಾಲದ ಅಧಿವೇಶನವೂ ಆಗುತ್ತದೆ ಎಂದು ಅವರು ಹೇಳಿದರು,

ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಶಾ ಹೇಳಿದ ಅಂಶಗಳು ಗಡಿ ವಿವಾದದ ಬಗ್ಗೆ ಸ್ಪಷ್ಟತೆಗೆ ಸಹಾಯ ಮಾಡಲಿಲ್ಲ. “ಮಹಾಮೇಳಕ್ಕೆ ನಾವು ಈಗಾಗಲೇ ಮಹಾರಾಷ್ಟ್ರದ ಎಲ್ಲ ಪ್ರಮುಖ ನಾಯಕರನ್ನು ಆಹ್ವಾನಿಸಿದ್ದೇವೆ. ಅಮಿತ್ ಶಾ ಹೇಳಿದಂತೆ ಎರಡೂ ಕಡೆಯವರು ಯಥಾಸ್ಥಿತಿ ಕಾಯ್ದುಕೊಳ್ಳಬೇಕಾದರೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ 2004ರಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಾಗ ಎರಡೂ ರಾಜ್ಯಗಳು ಯಥಾಸ್ಥಿತಿ ಕಾಯ್ದುಕೊಳ್ಳಬೇಕಿತ್ತು ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದ ಪ್ರಮುಖರ ಹಾಜರಾತಿಯನ್ನು ಲೆಕ್ಕಿಸದೆ ನಾವು ಈ ಮಹಾಮೇಳಾವವನ್ನು ನಡೆಸುತ್ತೇವೆ ಎಂದು ಎಂಇಎಸ್ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಖ್ಯಾತ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಮಾತನಾಡಿ, ಎರಡೂ ಕಡೆಯವರು ಒಪ್ಪಿಕೊಂಡಿರುವ ಷರತ್ತುಗಳ ಪ್ರಕಾರ ಡಿಸೆಂಬರ್ 19 ರಂದು ಎಂಇಎಸ್‌ನ ಸಮಾನಾಂತರ ಅಧಿವೇಶನ ಸೇರಿದಂತೆ ಗಡಿಯಲ್ಲಿ ಆಯೋಜಿಸುವ ಕರ್ನಾಟಕ ವಿರೋಧಿ ಕಾರ್ಯಕ್ರಮಗಳಿಗೆ ಮಹಾರಾಷ್ಟ್ರದ ಯಾವುದೇ ನಾಯಕರು ಭಾಗವಹಿಸಬಾರದು ಎಂದು ಹೇಳಿದರು.

ಆದರೆ, ರಾಜ್ಯ ಸರಕಾರವು ಟಿಳಕವಾಡಿಯ ವ್ಯಾಕ್ಸಿನ್ ಡಿಪೋದಲ್ಲಿ ನಡೆಸಲು ಉದ್ದೇಶಿಸಿರುವ ಎಂಇಎಸ್‌ಗೆ ಸಮಾನಾಂತರ ಅಧಿವೇಶನ ನಡೆಸಲು ಇನ್ನೂ ಅನುಮತಿ ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT