ಪ್ರಾತಿನಿಧಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಸರ್ಕಾರಿ ಹಾಸ್ಟೆಲ್‌ನಲ್ಲೇ ಪಿಯುಸಿ ವಿದ್ಯಾರ್ಥಿನಿಗೆ ಹೆರಿಗೆ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆಗಳು ಆಗ್ರಹ

ಚಿಕ್ಕಮಗಳೂರು ನಗರದ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಈ ಸಂಬಂಧ ಹಾಸ್ಟೆಲ್ ವಾರ್ಡನ್ ಹಾಗೂ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆಗಳು ಒತ್ತಾಯಿಸಿವೆ.

ಚಿಕ್ಕಮಗಳೂರು: ರಾಜ್ಯದ ಚಿಕ್ಕಮಗಳೂರು ನಗರದ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಈ ಸಂಬಂಧ ಹಾಸ್ಟೆಲ್ ವಾರ್ಡನ್ ಹಾಗೂ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆಗಳು ಒತ್ತಾಯಿಸಿವೆ.

ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಸೇರಿದಂತೆ ವಿವಿಧ ಸಂಘಟನೆಗಳು, ಸುಮಾರು 200 ವಿದ್ಯಾರ್ಥಿನಿಯರು ವಾಸಿಸುವ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಮೂಲಗಳ ಪ್ರಕಾರ, ಬಾಲಕಿ ತನ್ನ ಹೊಟ್ಟೆಯ ಸುತ್ತಲೂ ಬಟ್ಟೆಯನ್ನು ಸುತ್ತಿಕೊಂಡಿದ್ದರಿಂದ ಗರ್ಭಾವಸ್ಥೆಯನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಸಮಾಜ ಕಲ್ಯಾಣ ಅಧಿಕಾರಿ ಹೇಳಿದ್ದಾರೆ.
ಈ ಸಂಬಂಧ ಪೊಲೀಸರು ಪೊಕ್ಸೊ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಹೆಣ್ಣುಮಕ್ಕಳ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎದಿದ್ದು, ಈ ಪರಿಸ್ಥಿತಿಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಹಾಸ್ಟೆಲ್‌ಗಳಿಗೆ ಹೇಗೆ ಕಳುಹಿಸಬಹುದು ಎಂದು ಕಾರ್ಯಕರ್ತರು ಪ್ರಶ್ನಿಸಿದರು.

ಪ್ರತಿ ಮೂರು ತಿಂಗಳಿಗೊಮ್ಮೆ ಹೆಣ್ಣುಮಕ್ಕಳ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಬೇಕು. ಅಧಿಕಾರಿಗಳು ಈ ನಿಯಮ ಪಾಲಿಸಿದ್ದರೆ ಈ ಘಟನೆ ಬಹು ಮುಂಚೆಯೇ ಬೆಳಕಿಗೆ ಬರುತ್ತಿತ್ತು. ಬದಲಾಗಿ ಅಧಿಕಾರಿಗಳು ಹಾಸ್ಟೆಲ್‌ನಲ್ಲಿ ಹೆರಿಗೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಸಮಾಜ ಕಲ್ಯಾಣ ಅಧಿಕಾರಿ ಮತ್ತು ಹಾಸ್ಟೆಲ್ ವಾರ್ಡನ್ ಇಬ್ಬರೂ ಮಹಿಳೆಯರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಮತ್ತು ಇಬ್ಬರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT