ಸುಬ್ರಮಣಿಯನ್ ಸ್ವಾಮಿ 
ರಾಜ್ಯ

ನಾವೀನ್ಯತೆಯು ಭಾರತದ ಬೆಳವಣಿಗೆಯನ್ನು ಹೆಚ್ಚಿಸುತ್ತದೆ: ಸುಬ್ರಮಣಿಯನ್ ಸ್ವಾಮಿ

ನಾವೀನ್ಯತೆಯು ಭಾರತವು ಮತ್ತಷ್ಟು ಬೆಳೆಯಲು ಅನುವು ಮಾಡಿಕೊಡುತ್ತದೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ನಾವೀನ್ಯತೆಯು ಭಾರತವು ಮತ್ತಷ್ಟು ಬೆಳೆಯಲು ಅನುವು ಮಾಡಿಕೊಡುತ್ತದೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.
    
REVA ಬಿಸಿನೆಸ್ ಸ್ಕೂಲ್ (RBS) ವಿಶೇಷ ಉಪನ್ಯಾಸ ಸರಣಿಯಲ್ಲಿ 'ಉತ್ತಮ ಭವಿಷ್ಯದ ಅವಕಾಶಗಳಿಗಾಗಿ ನಾಯಕರು ಮತ್ತು ನವೋದ್ಯಮಿಗಳ ಅಗತ್ಯತೆ' ವಿಷಯದ ಕುರಿತು ಸುಬ್ರಮಣಿಯನ್ ಸ್ವಾಮಿಯವರು ಮಾತನಾಡಿದರು.

ನಾವು ಹೆಚ್ಚಿನ ಆವಿಷ್ಕಾರಗಳನ್ನು ಪರಿಚಯಿಸಿದರೆ, ಭಾರತದ ಬೆಳವಣಿಗೆಯು ಹೆಚ್ಚಾಗುತ್ತದೆ. ಇದು ಜನರ ಸಹಕಾರದಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಹೇಳಿದರು.

ದೇಶದ ಬೆಳವಣಿಗೆಯ ಚಕ್ರದಲ್ಲಿನ ಪ್ರತಿಯೊಂದು ರೇಖೆಯು ನಾವೀನ್ಯತೆಯ ಫಲಿತಾಂಶವಾಗಿದೆ ಮತ್ತು ಉತ್ಪಾದಕತೆಯು ನಾವೀನ್ಯತೆಯ ದೀರ್ಘಾವಧಿಯ ಫಲಿತಾಂಶವಾಗಿದೆ ಎಂದು ತಿಳಿಸಿದರು.

ಬಳಿಕ ಆವಿಷ್ಕಾರದ ಅಗತ್ಯದ ಕುರಿತು ಮಾತನಾಡಿದ ಅವರು, ಹೊಸ ಉತ್ಪನ್ನಗಳನ್ನು ಉತ್ಪಾದಿಸುವುದರಿಂದ ಜನರನ್ನು ಆಕರ್ಷಿಸಬಹುದು. ಈ ಅಗತ್ಯತೆಯ ಮೇಲೆ ವ್ಯಾಪಾರ ಕ್ಷೇತ್ರವು ಅಭಿವೃದ್ಧಿ ಹೊಂದುತ್ತದೆ ಎಂದರು.

ಈ ಜಗತ್ತಿನಲ್ಲಿ ಎರಡು ರೀತಿಯ ಜನರಿದ್ದಾರೆ. ಒಬ್ಬರು ಆವಿಷ್ಕಾರಕರಾಗಿ ಮತ್ತು ಇನ್ನೊಬ್ಬರು ಸಂಶೋಧಕರಾಗಿ ಇರುತ್ತಾರೆ. ಆವಿಷ್ಕಾರಕ ಸಹಾಯ ಮಾಡುವ ವ್ಯಕ್ತಿಯಾಗಿದ್ದರೆ, ಸಂಶೋಧಕ ನಾಯಕ ಮತ್ತು ಮಹತ್ವದ ಸಾಮಾಜಿಕ ಜವಾಬ್ದಾರಿಯನ್ನು ಹೊಂದಿರುತ್ತಾನೆ. ಭವಿಷ್ಯದ ನಾಯಕರನ್ನು ಅಭಿವೃದ್ಧಿಪಡಿಸಲು ಇಲ್ಲಿ ನಾವೀನ್ಯತೆ ಮುಖ್ಯವಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT