ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರಿನಲ್ಲಿ ಸಾರ್ವಜನಿಕವಾಗಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದ ದಂಪತಿ ಬಂಧನ

ಮೈಸೂರು ನಗರದ ಬಸ್ ಡಿಪೋದಲ್ಲಿದ್ದ ಅಂಗಡಿಗಳನ್ನು ತೆರವು ಮಾಡುವ ಸಂದರ್ಭದಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಸರ್ಕಾರಿ ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಎನ್ನಲಾದ ಆರೋಪಿ ಪತಿ ಮತ್ತು ಆತನ ಹೆಂಡತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮೈಸೂರು: ನಗರದ ಬಸ್ ಡಿಪೋದಲ್ಲಿದ್ದ ಅಂಗಡಿಗಳನ್ನು ತೆರವು ಮಾಡುವ ಸಂದರ್ಭದಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಸರ್ಕಾರಿ ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಎನ್ನಲಾದ ಆರೋಪಿ ಪತಿ ಮತ್ತು ಆತನ ಹೆಂಡತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ದಂಪತಿ ತಲೆಮರೆಸಿಕೊಂಡಿದ್ದರು. ಆದರೆ, ಈಗ ಅವರನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.

ಬಂಧಿತರನ್ನು ಕಾಂಗ್ರೆಸ್ ಮುಖಂಡ ಶಫೀಕ್ ಅಹ್ಮದ್ ಮತ್ತು ಅವರ ಪತ್ನಿ ಸೈಯದ್ ಮುನಿಬುನ್ನಿಸಾ ಎಂದು ಗುರುತಿಸಲಾಗಿದೆ. ಇಬ್ಬರನ್ನೂ ಪೊಲೀಸರು ರೌಡಿ ಶೀಟರ್‌ಗಳ ಪಟ್ಟಿಗೆ ಸೇರಿಸಿದ್ದಾರೆ ಎಂದು ತಿಳಿಸಿದರು.

ಆರೋಪಿ ದಂಪತಿ ಇತರ ಕೆಲವರ ಜೊತೆ ಸೇರಿ ಸಾತಗಳ್ಳಿ ಬಸ್ ಡಿಪೋದ ಆವರಣದಲ್ಲಿನ ತಮ್ಮ ಅಂಗಡಿಗಳನ್ನು ತೆರವುಗೊಳಿಸುವಂತೆ ನೋಟಿಸ್ ನೀಡಿದ್ದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದರು.

ದಂಪತಿ ಎರಡು ವರ್ಷಗಳಿಂದ ಬಾಡಿಗೆ ಪಾವತಿಸದ ಕಾರಣ ನ್ಯಾಯಾಲಯದ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಡಿಸೆಂಬರ್ 10 ರಂದು ಈ ಘಟನೆ ನಡೆದಿದ್ದು, ಇತರ ಮಹಿಳೆಯರೊಂದಿಗೆ ದಂಪತಿ ಅಧಿಕಾರಿಗಳನ್ನು ನಿಂದಿಸಿದ್ದರು ಮತ್ತು ಮಚ್ಚು ತೋರಿಸಿ ಬೆದರಿಸಿದ್ದರು.

ಅದು ವಿವಾದಕ್ಕೆ ತಿರುಗಿದಾಗ ಅವರು ತಲೆಮರೆಸಿಕೊಂಡಿದ್ದರು. ಈ ಕುರಿತು ಕೆಎಸ್‌ಆರ್‌ಟಿಸಿ ವಿಭಾಗೀಯ ಸಾರಿಗೆ ಅಧಿಕಾರಿ ಮರಿಗೌಡ ಅವರು ಮೈಸೂರಿನ ಉದಯಗಿರಿ ಪೊಲೀಸರಿಗೆ ದೂರು ನೀಡಿದ್ದರು.

ಘಟನೆಯ ಫೋಟೋಗಳು ಮತ್ತು ವಿಡಿಯೋಗಳು ವೈರಲ್ ಆಗಿವೆ. ಪಕ್ಕದ ಕೊಡಗು ಜಿಲ್ಲೆಯ ಹಳ್ಳಿಯಲ್ಲಿ ದಂಪತಿ ಪತ್ತೆಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT