ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ. 
ರಾಜ್ಯ

ಗಡಿ ವಿವಾದ: ನಾಗ್ಪುರ ಅಧಿವೇಶನದ ಬಳಿಕ ಬೆಳಗಾವಿಗೆ ಭೇಟಿ ನೀಡುತ್ತೇವೆ: ಮಹಾರಾಷ್ಟ್ರ ಸಚಿವರು

ಕರ್ನಾಟಕದ ಬೆಳಗಾವಿಯಲ್ಲಿ ಮತ್ತು ಮಹಾರಾಷ್ಟ್ರದ ನಾಗ್ಪುರದಲ್ಲಿ ಚಳಿಗಾಲದ ಅಧಿವೇಶನಗಳು ಪೂರ್ಣಗೊಂಡ ನಂತರ ಬೆಳಗಾವಿಗೆ ಭೇಟಿ ನೀಡುತ್ತೇವೆಂದು ಮಹಾರಾಷ್ಟ್ರ ಸಚಿವರು ಹೇಳಿದ್ದಾರೆ.

ಬೆಳಗಾವಿ: ಕರ್ನಾಟಕದ ಬೆಳಗಾವಿಯಲ್ಲಿ ಮತ್ತು ಮಹಾರಾಷ್ಟ್ರದ ನಾಗ್ಪುರದಲ್ಲಿ ಚಳಿಗಾಲದ ಅಧಿವೇಶನಗಳು ಪೂರ್ಣಗೊಂಡ ನಂತರ ಬೆಳಗಾವಿಗೆ ಭೇಟಿ ನೀಡುತ್ತೇವೆಂದು ಮಹಾರಾಷ್ಟ್ರ ಸಚಿವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ ಅವರು, ಉಭಯ ರಾಜ್ಯಗಳ ಅಧಿವೇಶನದ ಬಳಿಕ ಬೆಳಗಾವಿಗೆ ಭೇಟಿ ನೀಡಿ ಮಹಾರಾಷ್ಟ್ರ ಪರ ನಾಯಕರನ್ನು ಭೇಟಿ ಮಾಡುತ್ತೇವೆಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಯೋಗಕ್ಕೆ ಭರವಸೆ ನೀಡಿದರು.

ಬೆಳಗಾವಿ ಭೇಟಿ ವೇಳೆ ಮಹಾರಾಷ್ಟ್ರದ ಮತ್ತೋರ್ವ ಸಚಿವ ಚಂದ್ರಕಾಂತ್ ಪಾಟೀಲ್ ಅವರೂ ಕೂಡ ನಮ್ಮ ಜೊತೆಗೂಡಲಿದ್ದಾರೆಂದು ತಿಳಿಸಿದರು. ಅಧಿಕೃತ ಭೇಟಿ ಕುರಿತು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡುವುದಾಗಿ ದೇಸಾಯಿ ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ನಂತರ ಕರ್ನಾಟಕ ಸರ್ಕಾರದ ವರ್ತನೆಯಲ್ಲಿ ಕೆಲವು ಸಕಾರಾತ್ಮಕ ಬದಲಾವಣೆಗಳಾಗಿವೆ ಎಂದು ಅವರು ಹೇಳಿದರು.

ಬೆಳಗಾವಿಗೆ ಭೇಟಿ ನೀಡುವ ಮೊದಲು ದೇಸಾಯಿ ಮತ್ತು ಪಾಟೀಲ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ವಿವರವಾದ ಚರ್ಚೆ ನಡೆಸುವುದಾಗಿ ಹೇಳಿದರು.

ಶುಕ್ರವಾರ ಸಂಜೆ ಕರ್ನಾಟಕದ ಗಡಿಭಾಗದಲ್ಲಿರುವ ಮಹಾರಾಷ್ಟ್ರದ ಸಿನೋಲಿ ಗ್ರಾಮಕ್ಕೆ ಭೇಟಿ ನೀಡಿದ ಎಂಇಎಸ್ ನಿಯೋಗದೊಂದಿಗೆ ದೇಸಾಯಿ ಅವರು ಮಾತುಕತೆ ನಡೆಸಿದರು.

ವಿಕಾಸ ಕಲಘಟಗಿ ನೇತೃತ್ವದ ಎಂಇಎಸ್ ನಿಯೋಗ ಗಡಿ ವಿವಾದದ ಕುರಿತು ದೇಸಾಯಿ ಅವರನ್ನು ಭೇಟಿ ಮಾಡಿತು.

ಗಡಿ ವಿವಾದದಿಂದ ತೀವ್ರ ಸಮಸ್ಯೆ ಎದುರಿಸುತ್ತಿರುವ ಮಹಾರಾಷ್ಟ್ರ ಪರ ಹೋರಾಟಗಾರರಿಗೆ ಸಹಾಯವಾಣಿ ಸ್ಥಾಪಿಸುವಂತೆ ಇದೇ ವೇಳೆ ಎಂಇಎಸ್‌ನ ಕೆಲವು ಸದಸ್ಯರು ಸಚಿವರನ್ನು ಒತ್ತಾಯಿಸಿದರು.

ಡಿಸೆಂಬರ್ 19 ರಂದು ಕರ್ನಾಟಕ ಮತ್ತು ಮಹಾರಾಷ್ಟ್ರದ ಚಳಿಗಾಲದ ಅಧಿವೇಶನಗಳು ಏಕಕಾಲದಲ್ಲಿ ನಡೆಯಲಿದ್ದು, ಮಹಾರಾಷ್ಟ್ರದ ಎಲ್ಲಾ ಸಚಿವರು ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT