ಸಂಗ್ರಹ ಚಿತ್ರ 
ರಾಜ್ಯ

200 ವರ್ಷಗಳ ಹಳೆಯ ಬುದ್ಧನ ವಿಗ್ರಹ ಮಾರಲು ಯತ್ನ: ಐವರ ಬಂಧನ

ಸುಮಾರು 200 ವರ್ಷಗಳಷ್ಟು ಪುರಾತನ ಕಾಲದ ಬುದ್ಧನ ವಿಗ್ರಹವನ್ನು ರಫ್ತು ಮಾಡಲು ಯತ್ನಿಸುತ್ತಿದ್ದ ಐವರನ್ನು ಸಂಪಂಗಿರಾಮನಗರ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಸುಮಾರು 200 ವರ್ಷಗಳಷ್ಟು ಪುರಾತನ ಕಾಲದ ಬುದ್ಧನ ವಿಗ್ರಹವನ್ನು ರಫ್ತು ಮಾಡಲು ಯತ್ನಿಸುತ್ತಿದ್ದ ಐವರನ್ನು ಸಂಪಂಗಿರಾಮನಗರ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಹೈದರಾಬಾದ್ ನಿವಾಸಿ ಪಂಚಮೃತಿ ರಘುರಾಮ ಚೌಧರಿ ಅಲಿಯಾಸ್ ಪಿ ರಘು (45), ಹೊರಮಾವಿನ ಉದಯ್ ಕುಮಾರ್ (37), ವಿವೇಕನಗರದ ಫ್ರೆಡ್ಡಿ ಡಿಸೋಜಾ (44), ಹೆಣ್ಣೂರು ಬಂಡೆಯ ಶರಣ್ ನಾಯರ್ (41) ಮತ್ತು ಕೊತ್ತನೂರಿನ ಪ್ರಸನ್ನ ಎಂಕೆ (39) ಎಂದು ಗುರುತಿಸಲಾಗಿದೆ.

ವುಡ್‌ಲ್ಯಾಂಡ್ಸ್ ಹೋಟೆಲ್ ಬಳಿ ಕೆಲವು ವ್ಯಕ್ತಿಗಳು ಬುದ್ಧನ ಪುರಾತನ ವಿಗ್ರಹವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆಂಬ ಮಾಹಿತಿ ತಿಳಿದುಬಂದಿತ್ತು, ಇದರಂತೆ ನಮ್ಮ ತಂಡವು ಕಾರ್ಯಾಚರಣೆ ನಡೆಸಿ ಐವರನ್ನು ಬಂಧನಕ್ಕೊಳಪಡಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಗ್ರಹವು ಕಾನೂನುಬದ್ಧವಾಗಿ ಅವರಿಗೆ ಸೇರಿದ್ದಾಗಿದೆ ಎಂಬುದನ್ನು ಸಾಬೀತುಪಡಿಸಲು ಅವರ ಬಳಿ ಯಾವುದೇ ದಾಖಲೆಗಳಿರಲಿಲ್ಲ. ಹೀಗಾಗಿ ಅವರನ್ನು ಬಂಧನಕ್ಕೊಳಪಡಿಸಲಾಯಿತು. ಬಂಧಿತರಿಂದ 38 ಸೆಂ.ಮೀ ಬುದ್ಧನ ವಿಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹೈದಾರಾಬಾದ್ ನಿವಾಸಿ ಶ್ರೀಕಾಂತ್ ಅವರಿಂದ ರೂ.30 ಲಕ್ಷ ನೀಡಿ ವಿಗ್ರಹ ಖರೀದಿ ಮಾಡಿರುವುದಾಗಿ ವಿಚಾರಣೆ ವೇಳೆ ರಘು ಎಂಬಾತ ಬಹಿರಂಗಪಡಿಸಿದ್ದಾನೆ. ಇಂತಹ ವಿಗ್ರಹಗಳಿಗೆ ವಿದೇಶಗಳಲ್ಲಿ ಬೇಡಿಕೆಗಳು ಇರುವುದರಿಂದ ವಿಗ್ರಹವನ್ನು ರಫ್ತು ಮಾಡಿ ಮಾರಾಟ ಮಾಡಿದರೆ ಕೋಟ್ಯಾಂತರ ರುಪಾಯಿ ಸಿಗಲಿದೆ ಈ ಹಣವನ್ನು ಎಲ್ಲರೂ ಹಂಚಿಕೊಳ್ಳಬಹುದು ಎಂದು ಆರೋಪಿಗಳು ಯೋಜಿಸಿದ್ದರು.

ವಿಗ್ರಹವನ್ನು ಎಲ್ಲಿಂದಲೋ ಕಳ್ಳತನ ಮಾಡಿದ್ದಾರೆ. ಆ ಬಗ್ಗೆ ತನಿಖೆ ನಡೆಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳು ಮತ್ತು ಪುರಾತನ ವಸ್ತುಗಳು ಮತ್ತು ಕಲಾ ನಿಧಿ ಕಾಯ್ದೆ 1972 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

SCROLL FOR NEXT