ಬಿಬಿಎಂಪಿ ತ್ಯಾಜ್ಯ ಲಾರಿ 
ರಾಜ್ಯ

ಬಿಬಿಎಂಪಿ ಕಸದ ಲಾರಿಯಿಂದ ವರ್ತೂರು ಕೆರೆಗೆ ಸೇರುತ್ತಿದೆ ವಿಷಕಾರಿ ದ್ರವ!

ವರ್ತೂರು ಕೆರೆ ಸೇತುವೆ ಮೇಲೆ ನಿಲ್ಲುತ್ತಿರುವ ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ (ಲೀಚೆಟ್) ಸೇರುತ್ತಿರುವುದು ಕಂಡು ಬಂದಿದೆ.

ಬೆಂಗಳೂರು: ವರ್ತೂರು ಕೆರೆ ಸೇತುವೆ ಮೇಲೆ ನಿಲ್ಲುತ್ತಿರುವ ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ (ಲೀಚೆಟ್) ಸೇರುತ್ತಿರುವುದು ಕಂಡು ಬಂದಿದೆ.

ಲೀಚೆಟ್ ಒಂದು ದ್ರವವಾಗಿದ್ದು ಕಸದ ವಸ್ತುಗಳಿಂದ ಸಂಗ್ರಹಗೊಂಡು ಹಾನಿಕಾರಕ ದ್ರವ ಅಥವಾ ವಿಷಕಾರಿ ದ್ರವವಾಗಿ ಮಾರ್ಪಾಡುತ್ತದೆ.

ವಿಷಕಾರಿ ದ್ರವ ಕೆರೆ ನೀರಿಗೆ ಸೇರುತ್ತಿರುವ ಸಂಬಂಧ ಈಗಾಗಲೇ ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ವಾರ್ಡ್ ಸಮಿತಿ ಸಭೆಗಳಲ್ಲಿ ಈ ಬಗ್ಗೆ ಪ್ರಸ್ತಾಪಿಸಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಇಲ್ಲಿನ ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ವರ್ತೂರಿನ ನಿವಾಸಿ, ವರ್ತೂರು ರೈಸಿಂಗ್‌ ಸದಸ್ಯ ಜಗದೀಶ್‌ ರೆಡ್ಡಿ ಮಾತನಾಡಿ, ಈ ಸಮಸ್ಯೆ ಆರಂಭವಾಗಿ 9 ತಿಂಗಳುಗಳಾಗಿದೆ. ಟ್ರಕ್ ಅನ್ನು ರಾತ್ರಿಯಲ್ಲಿ ನಿಲ್ಲಿಸಲಾಗುತ್ತಿದ್ದು, ಬೆಳಿಗ್ಗೆ ವರೆಗೂ ಸೇತುವೆಯ ಮೇಲೆಯೇ ಇರಿಸಲಾಗುತ್ತದೆ, ಈ ಸಮಯದಲ್ಲಿ ಸೋರಿಕೆಯಾಗುವ ಎಲ್ಲಾ ಕೊಳಕು ದ್ರವವು ರಸ್ತೆಗೆ ಬಂದು ಕೆರೆಗೆ ಸೇರುತ್ತಿದೆ ಎಂದು ಹೇಳಿದ್ದಾರೆ.

ಘನತ್ಯಾಜ್ಯ ನಿರ್ವಹಣೆಯ ನಿಗದಿತ ನಿಯಮಗಳ ಪ್ರಕಾರ, ಕಾಂಪ್ಯಾಕ್ಟರ್‌ಗಳು ಮತ್ತು ಟ್ರಕ್‌ಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಮತ್ತು ಕೆರೆಗಳು, ವಸತಿ ಪ್ರದೇಶಗಳು, ಶಾಲೆಗಳು ಮತ್ತು ಆಸ್ಪತ್ರೆಗಳಿಂದ ದೂರದಲ್ಲಿ ನಿಲ್ಲಿಸಬೇಕೆಂದು ತಿಳಿಸಲಾಗಿದೆ. ಆಟೊ ಟಿಪ್ಪರ್‌ಗಳು ‘ಟ್ರಾನ್ಸ್‌ಫರ್‌ ಪಾಯಿಂಟ್‌’ ಎಂಬ ನಿಗದಿತ ಸ್ಥಳಕ್ಕೆ ಬಂದು ಸಂಗ್ರಹವಾದ ತ್ಯಾಜ್ಯವನ್ನು ಖಾಲಿ ಮಾಡಬೇಕು.

ತ್ಯಾಜ್ಯ ಲಾರಿಗಳು ಸ್ಥಳವನ್ನು ತೊರೆದ ನಂತರ, ಸೋಂಕು ಹರಡುವುದನ್ನು ತಡೆಯಲು ಆ ಪ್ರದೇಶಕ್ಕೆ ಬ್ಲೀಚಿಂಗ್ ಪೌಡರ್‌ನಂತಹ ರಾಸಾಯನಿಕಗಳಿಂದ ಸ್ವಚ್ಛಗೊಳಿಸಬೇಕು. ಆದರೆ, ಈ ಪ್ರಕ್ರಿಯೆಗಳು ಎಲ್ಲಿಯೂ ನಡೆಯುತ್ತಿಲ್ಲ. ಈ ಸ್ವಚ್ಛತೆಗಾಗಿ ಪ್ರತಿ ತಿಂಗಳು ರೂ.1.5 ಹಣವನ್ನು ಮಂಜೂರು ಮಾಡಲಾಗುತ್ತಿದೆ. ಆದರೆ, ಆದಾವುದೂ ಆಗುತ್ತಿಲ್ಲ ಎಂದು ರೆಡ್ಡಿ ತಿಳಿಸಿದ್ದಾರೆ.

ಬಿಬಿಎಂಪಿ ತ್ಯಾಜ್ಯ ಲಾರಿಗಳು ಕೆರೆ ಸೇತುವೆಯ ಮೇಲೆ ನಿಲುಗಡೆಯಾಗಿರುವುದನ್ನು ಖಚಿತಪಡಿಸಿದ ಘನತ್ಯಾಜ್ಯ ನಿರ್ವಹಣೆಯ ಸಹಾಯಕ ಎಂಜಿನಿಯರ್, 10 ದಿನಗಳ ಹಿಂದೆ ಉಲ್ಲಂಘನೆಯನ್ನು ಗಮನಿಸಲಾಗಿದೆ. ವಾಹನಗಳನ್ನು ಸುರಕ್ಷಿತ ಸ್ಥಳದಲ್ಲಿ ನಿಲ್ಲಿಸಲು ಚಾಲಕರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕೆರೆಯ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನ ನಿಲ್ಲಿಸದಂತೆ ಕಸದ ಲಾರಿ ಚಾಲಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT