ಸಾಂದರ್ಭಿಕ ಚಿತ್ರ 
ರಾಜ್ಯ

ಕೆಲಸಕ್ಕೆಂದು ಕರೆದು 21 ವರ್ಷದ ಯುವತಿಯ ಅತ್ಯಾಚಾರಗೈದ 47 ವರ್ಷದ ವ್ಯಕ್ತಿ!

ಆನ್ಲೈನ್ ಪ್ಲಾಟ್ ಫಾರ್ಮ್ ಮೂಲಕ ಕೆಲಸಕ್ಕೆಂದು ಯುವತಿಯ ಕರೆಸಿಕೊಂಡ ವ್ಯಕ್ತಿಯೋರ್ವ ಆಕೆಯ ಮೇಲೆ ಅತ್ಯಾಚಾರ ವೆಸಗಿರುವ ಘಟವೆ ಬೆಂಗಳೂರಿನಲ್ಲಿ ನಡೆದಿದೆ.

ಆನೇಕಲ್: ಆನ್ಲೈನ್ ಪ್ಲಾಟ್ ಫಾರ್ಮ್ ಮೂಲಕ ಕೆಲಸಕ್ಕೆಂದು ಯುವತಿಯ ಕರೆಸಿಕೊಂಡ ವ್ಯಕ್ತಿಯೋರ್ವ ಆಕೆಯ ಮೇಲೆ ಅತ್ಯಾಚಾರ ವೆಸಗಿರುವ ಘಟವೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಆನೇಕಲ್ ತಾಲೂಕಿನ ಪರಪ್ಪನ ಅಗ್ರಹಾರ ವ್ಯಾಪ್ತಿಯ ಕೂಡ್ಲು ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಕೆಲಸಕ್ಕೆಂದು ಯುವತಿಯನ್ನು ಬುಕ್ ಮೈ ಬಾಯಿ ಎಂಬ ಆ್ಯಪ್ (BookMyBai App) ಮೂಲಕ ಕರೆಸಿಕೊಂಡು ಅತ್ಯಾಚಾರ (Rape on young girl) ಎಸೆಗಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬುಕ್ ಮೈ ಬಾಯಿ ಆ್ಯಪ್​ನಿಂದ 21 ವರ್ಷದ ಯುವತಿಯನ್ನು ಮನೆಗೆ ಕರೆಸಿದ 47 ವರ್ಷದ ಬಾಬು ಈ ಹೇಯ ಕೃತ್ಯ ಎಸಗಿದ್ದು, ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಘಟನೆ?
ಬುಕ್ ಮೈ ಬಾಯಿ ಆ್ಯಪ್ ಮನೆಗೆಲಸಕ್ಕೆ ಮಹಿಳೆಯರನ್ನು ಒದಗಿಸುವ ಆನ್ಲೈನ್ ಕಂಪನಿಯಾಗಿದ್ದು, ವಿಲ್ಸನ್ ಗಾರ್ಡನ್ ಬಳಿ ಕಚೇರಿ ಇದೆ. ಈ ಆ್ಯಪ್ ಮೂಲಕ ವೃದ್ಧೆ ತಾಯಿಯನ್ನು ನೋಡಿಕೊಳ್ಳಲೆಂದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಕೂಡ್ಲು ಬಡಾವಣೆ ನಿವಾಸಿ ಬಾಬು ಒರಿಸ್ಸಾ ಮೂಲದ 21 ವರ್ಷದ ಯುವತಿಯನ್ನು ಕರೆಸಿಕೊಂಡಿದ್ದಾನೆ. ಯುವತಿ ಮನೆಗೆ ಬಂದ ತಕ್ಷಣವೇ ಆಕೆಯ ಮೇಲೆ ಅತ್ಯಾಚಾರ ಎಸಗಿ ಯಾರಿಗಾದರೂ ಹೇಳಿದರೆ ಕೊಲೆ ಮಾಡಿ ಬಿಡುತ್ತೇನೆ ಎಂದು ಜೀವಬೆದರಿಕೆ ಹಾಕಿ ಮನೆಯಲ್ಲಿ ಕೂಡಿ ಹಾಕಿ ಕೆಲಸಕ್ಕೆ ತೆರಳಿದ್ದಾನೆ.

ತನ್ನ ಬಳಿ ಇದ್ದ ಮೊಬೈಲ್​ನಿಂದ ಕಂಪನಿಗೆ ಕರೆ ಮಾಡಿದ ಯುವತಿ, ನಡೆದಿರುವ ಕೃತ್ಯವನ್ನು ಹೇಳಿಕೊಂಡಿದ್ದಾಳೆ. ಕೂಡಲೇ ಎಚ್ಚೆತ್ತ ಕಂಪನಿ, ಕೃತ್ಯದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಪ್ರಕರಣ ದಾಖಲಿಸಿದ ಪೊಲೀಸರು, ಆರೋಪಿ ಬಾಬುನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ನವೆಂಬರ್ 31ರ ರಾತ್ರಿ ಈ ಘಟನೆ ನಡೆದಿದ್ದು, ಡಿಸೆಂಬರ್ ‌2 ರಂದು ಪರಪ್ಪನ ಅಗ್ರಹಾರ ಪೊಲೀಸರು ಸಂತ್ರಸ್ತೆಯಿಂದ ಹೇಳಿಕೆ ಪಡೆದುಕೊಂಡಿದ್ದರು ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT