ಸಾಂದರ್ಭಿಕ ಚಿತ್ರ 
ರಾಜ್ಯ

ಕೆಲಸಕ್ಕೆಂದು ಕರೆದು 21 ವರ್ಷದ ಯುವತಿಯ ಅತ್ಯಾಚಾರಗೈದ 47 ವರ್ಷದ ವ್ಯಕ್ತಿ!

ಆನ್ಲೈನ್ ಪ್ಲಾಟ್ ಫಾರ್ಮ್ ಮೂಲಕ ಕೆಲಸಕ್ಕೆಂದು ಯುವತಿಯ ಕರೆಸಿಕೊಂಡ ವ್ಯಕ್ತಿಯೋರ್ವ ಆಕೆಯ ಮೇಲೆ ಅತ್ಯಾಚಾರ ವೆಸಗಿರುವ ಘಟವೆ ಬೆಂಗಳೂರಿನಲ್ಲಿ ನಡೆದಿದೆ.

ಆನೇಕಲ್: ಆನ್ಲೈನ್ ಪ್ಲಾಟ್ ಫಾರ್ಮ್ ಮೂಲಕ ಕೆಲಸಕ್ಕೆಂದು ಯುವತಿಯ ಕರೆಸಿಕೊಂಡ ವ್ಯಕ್ತಿಯೋರ್ವ ಆಕೆಯ ಮೇಲೆ ಅತ್ಯಾಚಾರ ವೆಸಗಿರುವ ಘಟವೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಆನೇಕಲ್ ತಾಲೂಕಿನ ಪರಪ್ಪನ ಅಗ್ರಹಾರ ವ್ಯಾಪ್ತಿಯ ಕೂಡ್ಲು ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಕೆಲಸಕ್ಕೆಂದು ಯುವತಿಯನ್ನು ಬುಕ್ ಮೈ ಬಾಯಿ ಎಂಬ ಆ್ಯಪ್ (BookMyBai App) ಮೂಲಕ ಕರೆಸಿಕೊಂಡು ಅತ್ಯಾಚಾರ (Rape on young girl) ಎಸೆಗಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬುಕ್ ಮೈ ಬಾಯಿ ಆ್ಯಪ್​ನಿಂದ 21 ವರ್ಷದ ಯುವತಿಯನ್ನು ಮನೆಗೆ ಕರೆಸಿದ 47 ವರ್ಷದ ಬಾಬು ಈ ಹೇಯ ಕೃತ್ಯ ಎಸಗಿದ್ದು, ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಘಟನೆ?
ಬುಕ್ ಮೈ ಬಾಯಿ ಆ್ಯಪ್ ಮನೆಗೆಲಸಕ್ಕೆ ಮಹಿಳೆಯರನ್ನು ಒದಗಿಸುವ ಆನ್ಲೈನ್ ಕಂಪನಿಯಾಗಿದ್ದು, ವಿಲ್ಸನ್ ಗಾರ್ಡನ್ ಬಳಿ ಕಚೇರಿ ಇದೆ. ಈ ಆ್ಯಪ್ ಮೂಲಕ ವೃದ್ಧೆ ತಾಯಿಯನ್ನು ನೋಡಿಕೊಳ್ಳಲೆಂದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಕೂಡ್ಲು ಬಡಾವಣೆ ನಿವಾಸಿ ಬಾಬು ಒರಿಸ್ಸಾ ಮೂಲದ 21 ವರ್ಷದ ಯುವತಿಯನ್ನು ಕರೆಸಿಕೊಂಡಿದ್ದಾನೆ. ಯುವತಿ ಮನೆಗೆ ಬಂದ ತಕ್ಷಣವೇ ಆಕೆಯ ಮೇಲೆ ಅತ್ಯಾಚಾರ ಎಸಗಿ ಯಾರಿಗಾದರೂ ಹೇಳಿದರೆ ಕೊಲೆ ಮಾಡಿ ಬಿಡುತ್ತೇನೆ ಎಂದು ಜೀವಬೆದರಿಕೆ ಹಾಕಿ ಮನೆಯಲ್ಲಿ ಕೂಡಿ ಹಾಕಿ ಕೆಲಸಕ್ಕೆ ತೆರಳಿದ್ದಾನೆ.

ತನ್ನ ಬಳಿ ಇದ್ದ ಮೊಬೈಲ್​ನಿಂದ ಕಂಪನಿಗೆ ಕರೆ ಮಾಡಿದ ಯುವತಿ, ನಡೆದಿರುವ ಕೃತ್ಯವನ್ನು ಹೇಳಿಕೊಂಡಿದ್ದಾಳೆ. ಕೂಡಲೇ ಎಚ್ಚೆತ್ತ ಕಂಪನಿ, ಕೃತ್ಯದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಪ್ರಕರಣ ದಾಖಲಿಸಿದ ಪೊಲೀಸರು, ಆರೋಪಿ ಬಾಬುನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ನವೆಂಬರ್ 31ರ ರಾತ್ರಿ ಈ ಘಟನೆ ನಡೆದಿದ್ದು, ಡಿಸೆಂಬರ್ ‌2 ರಂದು ಪರಪ್ಪನ ಅಗ್ರಹಾರ ಪೊಲೀಸರು ಸಂತ್ರಸ್ತೆಯಿಂದ ಹೇಳಿಕೆ ಪಡೆದುಕೊಂಡಿದ್ದರು ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT