ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ 
ರಾಜ್ಯ

ವಿಧಾನಸಭೆ ಅಧಿವೇಶನ ಬಹಿಷ್ಕರಿಸಿದ ಈಶ್ವರಪ್ಪ: ಮಾಧ್ಯಮದವರ ಪ್ರಶ್ನೆಗೆ ಕೆಂಡಾಮಂಡಲಗೊಂಡ ಸಿಎಂ ಬೊಮ್ಮಾಯಿ

ಮಾಜಿ ಸಚಿವ ಈಶ್ವರಪ್ಪ ರಿಂದ ಸದನ ಬಹಿಷ್ಕಾರ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಂಡಾಮಂಡಲಗೊಂಡರು.

ಬೆಳಗಾವಿ: ಮಾಜಿ ಸಚಿವ ಈಶ್ವರಪ್ಪ ರಿಂದ ಸದನ ಬಹಿಷ್ಕಾರ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಂಡಾಮಂಡಲಗೊಂಡರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮಾಧ್ಯಮದವರ ಮೇಲೆ ಸಿಡಿಮಿಡಿಗೊಂಡರು. ನೀವು ಅದನ್ನೆಲ್ಲ ಸೃಷ್ಟಿ ಮಾಡಿಕೊಂಡು ಹೇಳಬೇಡಿ. ನಾನು ಈಶ್ವರಪ್ಪ ಜೊತೆ ಮಾತಾಡುತ್ತೇನೆಂದು ಹೇಳಿದರು.

ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ, "ಪಂಚಮಸಾಲಿ ಮೀಸಲಾತಿ ನೀಡುವ ಬಗ್ಗೆ ಗಡುವು ನಾನೇನು ಕೊಟ್ಟಿಲ್ಲ. ಹಿಂದುಳಿದ ಆಯೋಗದ ಅಧ್ಯಕ್ಷರಿಗೆ ವರದಿ ಕೊಡಲು ಹೇಳಿದ್ದೇನೆ. ಅಧಿವೇಶನ ಆರಂಭವಾಗುವ ಮುನ್ನ ವರದಿ ಕೊಡಲು ಹೇಳಿದ್ದೆ. ಆಯೋಗ ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದರ ವರದಿ ಇನ್ನೂ ಬಂದಿಲ್ಲ. ಅತಿ ಶ್ರೀಘ್ರದಲ್ಲಿ ಅವರು ವರದಿ ಕೊಡುವ ವಿಶ್ವಾಸವಿದೆ. ಆನಂತರ ಅದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT