ಸಾಂದರ್ಭಿಕ ಚಿತ್ರ 
ರಾಜ್ಯ

ಬಾಗಲಕೋಟೆಯಲ್ಲಿ ಮರ್ಯಾದೆ ಹತ್ಯೆ: ಅನ್ಯ ಸಮುದಾಯದವನನ್ನು ಮದುವೆಯಾಗಿದ್ದ ಪುತ್ರಿ; ಅಳಿಯನನ್ನು ಕೊಚ್ಚಿ ಕೊಂದ ತಂದೆ

ಅನ್ಯ ಸಮುದಾಯದವನನ್ನು ಪ್ರೀತಿಸಿ ಮದುವೆ ಆಗಿದ್ದಾಳೆ ಎಂದು ತಂದೆಯೇ ಮಗಳ ಪತಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಮಖಂಡಿ ತಾಲೂಕಿನ ಟಕ್ಕೋಡ ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆ: ಅನ್ಯ ಸಮುದಾಯದವನನ್ನು ಪ್ರೀತಿಸಿ ಮದುವೆ ಆಗಿದ್ದಾಳೆ ಎಂದು ತಂದೆಯೇ ಮಗಳ ಪತಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಮಖಂಡಿ ತಾಲೂಕಿನ ಟಕ್ಕೋಡ ಗ್ರಾಮದಲ್ಲಿ ನಡೆದಿದೆ.

ಜಮಖಂಡಿ ತಾಲೂಕಿನ ಟಕ್ಕೋಡ ಗ್ರಾಮದ ಭುಜಬಲ ಕರ್ಜಗಿ (34) ಕೊಲೆಯಾದ ವ್ಯಕ್ತಿ. ಇದೇ ಗ್ರಾಮದ ಭಾಗ್ಯಶ್ರಿ ತಂದೆ ತಮ್ಮನಗೌಡ, ಭುಜಬಲನ ಕಣ್ಣಿಗೆ ಕಾರದ ಪುಡಿ ಎರಚಿ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಒಂದೇ ಗ್ರಾಮದ ಕ್ಷತ್ರೀಯ ಜಾತಿಯ ಭಾಗ್ಯಶ್ರೀ ಹಾಗೂ ಜೈನ ಸಮುದಾಯದ ಭುಜಬಲ ಇಬ್ಬರೂ ಪ್ರೀತಿಸಿ ವರ್ಷದ ಹಿಂದೆ ಮನೆ ಬಿಟ್ಟು ಹೋಗಿ ಮದುವೆ ಆಗಿದ್ದರು. ಬಳಿಕ ಇಬ್ಬರೂ ಟಕ್ಕೋಡ ಗ್ರಾಮದಲ್ಲೇ ಬಂದು ನೆಲೆಸಿದ್ದರು. ಮಗಳ ಮದುವೆಯ ಸೇಡು ಇಟ್ಟುಕೊಂಡಿದ್ದ ತಮ್ಮನಗೌಡ, ಡಿ.17ರ ರಾತ್ರಿ 8.30ಕ್ಕೆ ಅಳಿಯನನ್ನು ಕೊಂದು ಪರಾರಿಯಾಗಿದ್ದಾನೆ.

ಈ ಕೃತ್ಯಕ್ಕೆ ಇಬ್ಬರು ಸ್ನೇಹಿತರು ಸಹಾಯ ಮಾಡಿದ್ದಾರೆ ಎಂಬ​ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಘಟನೆ ಸಂಬಂಧ ಸಾವಳಗಿ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT