ಬೋನಿಗೆ ಬಿದ್ದ ಹುಲಿ 
ರಾಜ್ಯ

ಜೊಯಿಡಾ: ಕೊನೆಗೂ ಬೋನಿಗೆ ಬಿದ್ದ ಆತಂಕ ಸೃಷ್ಟಿಸಿದ ಹುಲಿ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನಲ್ಲಿ ಜಾನುವಾರುಗಳನ್ನು ಬಲಿ ಪಡೆದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಹುಲಿಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅದಿಕಾರಿಗಳು ಯಶಸ್ವಿಯಾಗಿದ್ದಾರೆ.

ಜೊಯಿಡಾ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನಲ್ಲಿ ಜಾನುವಾರುಗಳನ್ನು ಬಲಿ ಪಡೆದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಹುಲಿಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅದಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಲಿಯನ್ನು ಮೃಗಾಲಯಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಕಳ್ನೆ ಎಂಬಲ್ಲಿ ದನದ ಕೊಟ್ಟಿಗೆಯಲ್ಲಿ ಇಡಲಾಗಿದ್ದ ಬೋನಿನಲ್ಲಿ ಭಾನುವಾರ ರಾತ್ರಿ ಹುಲಿ ಸೆರೆಯಾಗಿದೆ. ಜೊಯಿಡಾ ತಾಲೂಕಿನ ಉಳವಿ ಗ್ರಾಮದ ಜನರು ಈ ಬೆಳವಣಿಗೆಯಿಂದ ನಿಟ್ಟುಸಿರು ಬಿಟ್ಟಿದ್ದು, ಹುಲಿಯನ್ನು ಹಿಡಿಯಲು ಅರಣ್ಯ ಇಲಾಖೆ ನಡೆಸಿದ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

ಒಂದು ವಾರದಲ್ಲಿ 10 ಜಾನುವಾರುಗಳನ್ನು ಕೊಂದಿದ್ದರಿಂದ ಇಡೀ ಪ್ರದೇಶದಲ್ಲಿ ಭಯ ಆವರಿಸಿತ್ತು. ಹುಲಿಯು ಪ್ರತಿದಿನ ಜನವಸತಿ ಪ್ರದೇಶಕ್ಕೆ ಬಂದು ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಈ ವೇಳೆ ಒಂದು ಅಥವಾ ಎರಡು ಹಸುಗಳು ಅಥವಾ ಕರುಗಳನ್ನು ಕೊಂದು ಕಾಡಿಗೆ ಎಳೆದೊಯ್ಯುತ್ತಿತ್ತು.

ಚಂದ್ರಾಳಿ, ಹೆನಕೋಳದಲ್ಲಿ ಮೂರು ಹಸುಗಳು ಹಾಗೂ ಮೆಳೆ ಪ್ರದೇಶದಲ್ಲಿ ಎರಡು ಎತ್ತುಗಳ ಮೇಲೆ ದಾಳಿ ಮಾಡಿದೆ. ಹುಲಿಗೆ ವಯಸ್ಸಾಗಿರುವುದರಿಂದ ಮನೆಗಳಿಗೆ ಹೊಂದಿಕೊಂಡಿರುವ ಕೊಟ್ಟಿಗೆಯಲ್ಲಿ ಸಾಕಿದ ಜಾನುವಾರುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹುಲಿಯ ದಾಳಿಯಿಂದ ಭಯಭೀತರಾಗಿದ್ದ ಗ್ರಾಮಸ್ಥರು ಯಾವಾಗ ಬೇಕಾದರೂ ನರಭಕ್ಷಕವಾಗಿ ಬದಲಾಗಬಹುದಾದ ಹುಲಿಯನ್ನು ಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್‌ ಶಾಸಕ, ಹಿರಿಯ ರಾಜಕಾರಣಿ ಆರ್‌.ವಿ. ದೇಶಪಾಂಡೆ ಅವರನ್ನು ಒತ್ತಾಯಿಸಿದ್ದರು.

ಕಾಳಿ ಮೀಸಲು ಅರಣ್ಯ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಾರಿಯೋ ಕ್ರಿಸ್ತರಾಜ ನೇತೃತ್ವದ ತಂಡ ಹುಲಿ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದರು. ಅಂತಿಮವಾಗಿ ಹುಲಿಯು ಬೋನಿಗೆ ಬಿದ್ದಿದೆ. ಉಳುವಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುನಾಥ ಮೊಕಾಶಿ ಅವರು ಈ ಭಾಗದ ಜನರಿಗೆ ಸಹಾಯ ಮಾಡಿದ ಅರಣ್ಯಾಧಿಕಾರಿಗಳನ್ನು ಅಭಿನಂದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT