ಸಂಗ್ರಹ ಚಿತ್ರ 
ರಾಜ್ಯ

ಬಿಆರ್‌ಟಿಯಲ್ಲಿ ಅನುಮಾನಸ್ಪಾದವಾಗಿ ಗಂಡು ಹುಲಿ ಸಾವು

ಬಿಳಿಗಿರಿ ರಂಗನಾಥ ಸ್ವಾಮಿ ದೇವಸ್ಥಾನ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಂಡು ಹುಲಿಯೊಂದು ಶವವಾಗಿ ಪತ್ತೆಯಾಗಿರುವುದು ಸಂರಕ್ಷಕರಲ್ಲಿ ಹಲವು ಪ್ರಶ್ನೆಗಳು ಮತ್ತು ಅನುಮಾನಗಳನ್ನು ಹುಟ್ಟುಹಾಕಿದೆ.

ಬೆಂಗಳೂರು: ಬಿಳಿಗಿರಿ ರಂಗನಾಥ ಸ್ವಾಮಿ ದೇವಸ್ಥಾನ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಂಡು ಹುಲಿಯೊಂದು ಶವವಾಗಿ ಪತ್ತೆಯಾಗಿರುವುದು ಸಂರಕ್ಷಕರಲ್ಲಿ ಹಲವು ಪ್ರಶ್ನೆಗಳು ಮತ್ತು ಅನುಮಾನಗಳನ್ನು ಹುಟ್ಟುಹಾಕಿದೆ.

ಕೊಳ್ಳೇಗಾಲ ವನ್ಯಜೀವಿ ವಲಯದ ಜಲಮೂಲದ ಬಳಿ ಶನಿವಾರ ಗಸ್ತು ತಿರುಗುತ್ತಿದ್ದ ತಂಡಕ್ಕೆ ಹುಲಿಯ ಶವ ದೊರೆತಿದೆ.

5-7 ವರ್ಷ ವಯಸ್ಸಿನ ಗಂಡು ಹುಲಿ ಇದಾಗಿದ್ದು, ಹುಲಿಯ ಕಣ್ಣು ಮತ್ತು ಮುಖದ ಮೇಲೆ ತೀವ್ರ ಗಾಯಗಳಾಗಿರುವುದು ಕಂಡು ಬಂದಿದೆ. ಮತ್ತೊಂದು ಪ್ರಾಣಿಯ ಜೊತೆಗೆ ಕಾದಾಡಿ ಹುಲಿ ಸತ್ತಿರಬಹುದು ಎಂದು ಕರ್ನಾಟಕ ಅರಣ್ಯ ಅಧಿಕಾರಿಗಳು ಹೇಳಿದ್ದಾರೆ,

ಆದರೆ ಸಂರಕ್ಷಣಾಕಾರರು ಮತ್ತು ಕಾರ್ಯಕರ್ತರು ಇದನ್ನು ನಿರಾಕರಿಸಿದ್ದು, ವಿಷ ಅಥವಾ ಬೇಟೆ ಕಾರಣದಿಂದ ಹುಲಿ ಸತ್ತಿರಬಹುದು. ಆದರೆ, ಈ ವಿಚಾರ ಕುರಿತು ಅರಣ್ಯ ಇಲಾಖೆ ಹೆಚ್ಚಿನ ಮಾಹಿತಿಗಳನ್ನು ಬಹಿರಂಗಪಡಿಸುತ್ತಿಲ್ಲ. ಇಲಾಖೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಹುಲಿಯ ಮರಣೋತ್ತರ ಪರೀಕ್ಷೆಯದ ವರದಿಗಳಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ನಡುವೆ ವೈದ್ಯರು ಬೇಟೆಯಾಡಿರುವ, ವಿಷ ಹಾಕಿರುವ ಶಂಕೆಗಳನ್ನು ತಳ್ಳಿಹಾಕಿದ್ದಾರೆ. ಹುಲಿಯ ಎಲ್ಲಾ ಕೋರೆ ಹಲ್ಲುಗಳು, ಉಗುರುಗಳು ಹಾಗೂ ಚರ್ಮ ಸಾಮಾನ್ಯವಾಗಿದ್ದು, ನಾಲಿಗೆ ಕಪ್ಪಾಗದ ಕಾರಣ ವಿಷ ಹಾಕಿರುವ ಸಾಧ್ಯತೆಗಳೂ ಕಡಿಮೆ ಇದೆ. ಶವ ಪತ್ತೆಯಾದ ನೀರಿನ ಜಲಮೂಲದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಬಿಆರ್‌ಟಿ ನಿರ್ದೇಶಕ ದೀಪ್ ಜೆ ಗುತ್ತಿಗೆದಾರ ಹೇಳಿದ್ದಾರೆ.

ಪ್ರಾಥಮಿಕ ಪರೀಕ್ಷಾ ವರದಿಯಲ್ಲಿ ಹುಲಿಯ ಹೊಟ್ಟೆ ಖಾಲಿಯಾಗಿದ್ದದ್ದು, ಹಸಿವಿನಿಂದ ಬಳಲುತ್ತಿದ್ದದ್ದು ಹಾಗೂ 10 ದಿನಗಳಿಂದ ಏನನ್ನೂ ತಿನ್ನದೇ ಇರುವುದು ಕಂಡು ಬಂದಿದೆ ಎಂದು ತಿಳಿದುಬಂದಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ಹುಲಿ ಸಾವನ್ನಪ್ಪಿದ ಮೊದಲ ಘಟನೆ ಇದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT