ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದ ಕನ್ನಡ ಸಂಘಟನೆಗಳ ಕಾರ್ಯಕರ್ತರು 
ರಾಜ್ಯ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಬೆಳಗಾವಿಯಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ; ಕರ್ನಾಟಕ ಪೊಲೀಸರು

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವು ಇಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ಮೊದಲ ದಿನದಿಂದಲೂ ಗದ್ದಲಕ್ಕೆ ಸಾಕ್ಷಿಯಾಗಿದೆ. ಈಗ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವು ಇಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ಮೊದಲ ದಿನದಿಂದಲೂ ಗದ್ದಲಕ್ಕೆ ಸಾಕ್ಷಿಯಾಗಿದೆ. ಈಗ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

'ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸಂಪೂರ್ಣ ಶಾಂತಿ ನೆಲೆಸಿದೆ. ಎರಡು ರಾಜ್ಯಗಳ ನಡುವೆ ವಾಹನ ಸಂಚಾರ ಸಾಮಾನ್ಯವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ.

ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಎಂಇಎಸ್) ಡಿಸೆಂಬರ್ 19 ರಂದು ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಎಂಎಂಇಎಸ್‌ನ ಮಹಾಮೇಳವ್ ಅನ್ನು ನಿಲ್ಲಿಸಲಾಗಿದೆ. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ನಾವು ಅಲ್ಲಿ ಪಡೆಗಳನ್ನು ನಿಯೋಜಿಸುತ್ತಿದ್ದೇವೆ ಎಂದರು.

ಬೆಳಗಾವಿಯನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸುವಂತೆ ಕರ್ನಾಟಕ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಮಹಾರಾಷ್ಟ್ರದ ನಾಯಕರು ತಮ್ಮ ಕಾರ್ಯಕ್ರಮಕ್ಕೆ ಹಾಜರಾಗಬೇಕೆಂದು ಎಂಎಂಇಎಸ್ ಬಯಸಿತ್ತು. ಆದರೆ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಹುದೆಂದು ಜಿಲ್ಲಾಡಳಿತ ಬೆಳಗಾವಿಗೆ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಹಾರಾಷ್ಟ್ರದ ಮುಖಂಡರಿಗೆ ಅನುಮತಿ ನಿರಾಕರಿಸಿದೆ.

ಈಮಧ್ಯೆ, ಗಡಿ ಸಮಸ್ಯೆ ಇತ್ಯರ್ಥವಾಗಿದ್ದು, ಅದನ್ನು ಮತ್ತೆ ಕೈಗೆತ್ತಿಕೊಳ್ಳುವ ಅಗತ್ಯವಿಲ್ಲ ಎಂಬ ರಾಜ್ಯದ ನಿಲುವನ್ನು ಪ್ರತಿಪಾದಿಸುವ ನಿರ್ಣಯವನ್ನು ಉಭಯ ಸದನಗಳಲ್ಲಿ ಅಂಗೀಕರಿಸಲು ರಾಜ್ಯದ ಶಾಸಕರೆಲ್ಲರೂ ನಿರ್ಧರಿಸಿದ್ದಾರೆ.

ಈ ಸ್ಥಳಗಳು ಗಣನೀಯವಾಗಿ ಮರಾಠಿ ಮಾತನಾಡುವ ಜನಸಂಖ್ಯೆಯನ್ನು ಹೊಂದಿವೆ ಎಂಬ ಕಾರಣಕ್ಕಾಗಿ ಬೆಳಗಾವಿ ಮತ್ತು ಇತರ ಕೆಲವು ನೆರೆಯ ಪ್ರದೇಶಗಳನ್ನು ಕರ್ನಾಟಕದಲ್ಲಿ ವಿಲೀನಗೊಳಿಸಬೇಕೆಂದು ಮಹಾರಾಷ್ಟ್ರ ಒತ್ತಾಯಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT