ಸಂಗ್ರಹ ಚಿತ್ರ 
ರಾಜ್ಯ

'ಸೂಕ್ಷ್ಮಾಣು ನಾಶಕ' ಏರ್ ಫಿಲ್ಟರ್‌ ಅಭಿವೃದ್ಧಿಪಡಿಸಿದ ಐಐಎಸ್'ಸಿ

ಗ್ರೀನ್ ಟೀ ರೋಗನಿರೋಧಕ ಶಕ್ತಿ ಹೆಚ್ಚಿಸಲು, ತೂಕ ಕಡಿಮೆ ಮಾಡಲು, ಹೊಟ್ಟೆಗೆ ಸಂಬಧಿಸಿದ ರೋಗಗಳ ನಿವಾರಿಸಲು ಮತ್ತು ಸೋಂಕಿನಿಂದ ದೂರವಿಡುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಆದರೀಗ ಈ ಗ್ರೀನ್ ಟೀ ಗಾಳಿಯಲ್ಲಿರುವ ಸೂಕ್ಷ್ಮಾಣುಗಳನ್ನು ನಾಶ ಮಾಡಲು ಸಹಾಯ ಮಾಡುತ್ತದೆ ಎಂಬ ವಿಚಾರವನ್ನು ಐಐಎಸ್'ಸಿ ತಿಳಿಸಿಕೊಂಡಿದೆ.

ಬೆಂಗಳೂರು: ಗ್ರೀನ್ ಟೀ ರೋಗನಿರೋಧಕ ಶಕ್ತಿ ಹೆಚ್ಚಿಸಲು, ತೂಕ ಕಡಿಮೆ ಮಾಡಲು, ಹೊಟ್ಟೆಗೆ ಸಂಬಧಿಸಿದ ರೋಗಗಳ ನಿವಾರಿಸಲು ಮತ್ತು ಸೋಂಕಿನಿಂದ ದೂರವಿಡುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಆದರೀಗ ಈ ಗ್ರೀನ್ ಟೀ ಗಾಳಿಯಲ್ಲಿರುವ ಸೂಕ್ಷ್ಮಾಣುಗಳನ್ನು ನಾಶ ಮಾಡಲು ಸಹಾಯ ಮಾಡುತ್ತದೆ ಎಂಬ ವಿಚಾರವನ್ನು ಐಐಎಸ್'ಸಿ ತಿಳಿಸಿಕೊಂಡಿದೆ.

ಗ್ರೀನ್ ಟೀ ನಲ್ಲಿರುವ ಪ್ರಯೋಜನಗಳನ್ನು ಮತ್ತಷ್ಟು ಬಳಕೆ ಮಾಡಿಕೊಂಡಿಸುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)ಯ ಸಂಶೋದಕರು, ಇದರಿಂದ 'ಸೂಕ್ಷ್ಮಾಣು ನಾಶಕ' ಏರ್ ಫಿಲ್ಟರ್‌'ನ್ನು ಅಭಿವೃದ್ಧಿಪಡಿಸಿದ್ದಾರೆ.

ಸಂಶೋಧಕರು ಗ್ರೀನ್ ಟೀ ಯಲ್ಲಿ ಕಂಡುಬರುವ ಪಾಲಿಫಿನಾಲ್‌ಗಳು ಮತ್ತು ಪಾಲಿಕಯಾನಿಕ್ ಪಾಲಿಮರ್‌ಗಳಂತಹ ಪದಾರ್ಥಗಳಿಂದ 'ಜರ್ಮ್ ಕಿಲ್ಲರ್' ಏರ್ ಫಿಲ್ಟರ್‌ನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಜರ್ಮ್ ಕಿಲ್ಲರ್ ನಿರ್ದಿಷ್ಟ ಸ್ಥಳಧಲ್ಲಿ ಸೂಕ್ಷ್ಮಜೀವಿಗಳನ್ನು ನಾಶಪಡಿಸುತ್ತದೆ. ಈ ಫಿಲ್ಟರ್ ಗಳು ಗಾಳಿಯಿಂದ ಹರಡುವ ರೋಗಕಾರಕಗಳಿಂದ ಉಂಟಾಗುವ ರೋಗಗಳನ್ನು ತಡೆಯಲಿದೆ.

ಐಐಎಸ್'ಸಿ ಅಭಿವೃದ್ಧಿಪಡಿಸಿರುವ ಈ ಫಿಲ್ಟರ್‌ಗಳನ್ನು ಏರ್ ಕಂಡಿಷನರ್‌ಗಳು, ಸೆಂಟ್ರಲ್ ಡಕ್ಟ್‌ಗಳು ಮತ್ತು ಏರ್ ಪ್ಯೂರಿಫೈಯರ್‌ಗಳಲ್ಲಿ ಬಳಸಬಹುದಾಗಿದೆ.

ಇದು ವಾಯು ಮಾಲಿನ್ಯದ ವಿರುದ್ಧ ಹೋರಾಡುವಲ್ಲಿ ಮತ್ತು ಸಾಂಕ್ರಾಮಿಕ ರೋಗವಾಗಿರುವ ಕೊರೋನಾ ವೈರಸ್ ನಂತಹ ಗಾಳಿಯಿಂದ ಹರಡುವ ರೋಗಕಾರಕಗಳ ಹರಡುವಿಕೆಯನ್ನು ತಡೆಯುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

ಸಂಶೋಧನೆಯ ತಂಡದ ನೇತೃತ್ವವನ್ನು ಪ್ರಾಧ್ಯಾಪಕ ಸೂರ್ಯಸಾರಥಿ ಬೋಸ್ ಮತ್ತು ಪ್ರಾಧ್ಯಾಪಕ ಕೌಶಿಕ್ ಚಟರ್ಜಿ ವಹಿಸಿದ್ದು, ಏರ್ ಫಿಲ್ಟರ್‌ಗಳ ನಿರಂತರ ಬಳಕೆಯು ಸೂಕ್ಷ್ಮಾಣುಜೀವಿಗಳ ಸಂತಾನೋತ್ಪತ್ತಿ ಸ್ಥಳಗಳನ್ನೂ ನಾಶಪಡಿಸಲಿದೆ ಎಂದು ವಿವರಿಸಿದ್ದಾರೆ.

ಫಿಲ್ಟರ್‌ನ ರಂಧ್ರಗಳು ಸೂಕ್ಷ್ಮಜೀವಿಗಳ ಸಂತಾನೋತ್ಪತ್ತಿ ಸ್ಥಳಗಳನ್ನು ಮುಚ್ಚಿ, ಅದರ ಜೀವಿತಾವಧಿಯನ್ನು ಕಡಿಮೆ ಮಾಡುತ್ತದೆ. ಸೂಕ್ಷ್ಮಾಣುಗಳ ಪುನರುಜ್ಜೀವನದಿಂದ ಎದುರಾಗುವ ಸೋಂಕನ್ನೂ ಇದು ತಡೆಯಲಿದೆ ಎಂದು ತಿಳಿಸಿದ್ದಾರೆ.

ಆಂಟಿಮೈಕ್ರೊಬಿಯಲ್ ಏರ್ ಫಿಲ್ಟರ್‌ಗಳನ್ನು ನ್ಯಾಷನಲ್ ಅಕ್ರೆಡಿಟೇಶನ್ ಬೋರ್ಡ್ ಫಾರ್ ಟೆಸ್ಟಿಂಗ್ ಮತ್ತು ಕ್ಯಾಲಿಬ್ರೇಶನ್ ಲ್ಯಾಬೊರೇಟರೀಸ್ (NABL) ನಲ್ಲಿ ಪರೀಕ್ಷಿಸಲಾಗಿದೆ. ಇದು 99.24 ಶೇಕಡಾ ದಕ್ಷತೆಯೊಂದಿಗೆ ಕೋವಿಡ್‌ನ ಡೆಲ್ಟಾ ರೂಪಾಂತರವನ್ನು ನಿಷ್ಕ್ರಿಯಗೊಳಿಸಲು ಸಾಧ್ಯವಾಗಿರುವುದನ್ನು ಖಚಿತಪಡಿಸಿದೆ.

ಕೋವಿಡ್ ಸಮಯದಲ್ಲಿ ನಡೆದ ಈ ಸಂಶೋಧನೆಗೆ ವಿಜ್ಞಾನ ಮತ್ತು ಎಂಜಿನಿಯರಿಂಗ್ ಸಂಶೋಧನಾ ಮಂಡಳಿ (SERB) ಮತ್ತು SERB-ತಂತ್ರಜ್ಞಾನ ಅನುವಾದ ಪ್ರಶಸ್ತಿಗಳು (SERB-TETRA) ಬೆಂಬಲ ನೀಡಿದ್ದು, ಈ ವರ್ಷ ಇದಕ್ಕೆ ಪೇಟೆಂಟ್ ಕೂಡ ಸಿಕ್ಕಿದೆ ಎದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT