ಸಚಿವ ಮುರುಗೇಶ್ ನಿರಾಣಿ 
ರಾಜ್ಯ

ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ಸರ್ಕಾರ 74 ಕೋಟಿ ರೂಪಾಯಿ ವ್ಯಯಿಸಿದೆ: ಸಚಿವ ನಿರಾಣಿ

ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ರಾಜ್. ಸರ್ಕಾರ 74 ಕೋಟಿ ರೂಪಾಯಿ ವ್ಯಯಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಅವರು ಮಂಗಳವಾರ ಹೇಳಿದರು.

ಬೆಳಗಾವಿ: ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ರಾಜ್. ಸರ್ಕಾರ 74 ಕೋಟಿ ರೂಪಾಯಿ ವ್ಯಯಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಅವರು ಮಂಗಳವಾರ ಹೇಳಿದರು.

ಮಂಗಳವಾರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಡಾ.ಕೆ.ಗೋವಿಂದರಾಜ್, ಎಂ.ನಾಗರಾಜ್, ಮಂಜುನಾಥ್ ಭಂಡಾರಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, 'ಇನ್ವೆಸ್ಟ್ ಕರ್ನಾಟಕ-2022' ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ 9.81 ಲಕ್ಷ ಕೋಟಿ ರೂಪಾಯಿ ಹೂಡಿಕೆಯನ್ನು ಸ್ವೀಕರಿಸಲಾಗಿದೆ, ಹೂಡಿಕೆದಾರರ ಸಮಾವೇಶ ಆಯೋಜನೆಗೆ 74 ಕೋಟಿ ರೂ ವ್ಯಯಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಸುಮಾರು 57 ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಯೋಜನೆಗಳು ಬೃಹತ್ ಪ್ರಮಾಣದಲ್ಲಿರುವುದರಿಂದ, ಅವುಗಳನ್ನು ಸ್ಥಾಪಿಸಲು 3-4 ವರ್ಷಗಳು ತೆಗೆದುಕೊಳ್ಳುತ್ತದೆ, ನಂತರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುತ್ತದೆ ಎಂದು ತಿಳಿಸಿದರು.

ಕಳೆದ 15 ವರ್ಷಗಳಲ್ಲಿ ಈ ಸಭೆಗಳಲ್ಲಿ ಭರವಸೆ ನೀಡಿದ ಒಟ್ಟು ಹೂಡಿಕೆಯಲ್ಲಿ ಇದುವರೆಗೆ ಶೇಕಡಾ 20 ಕ್ಕಿಂತ ಹೆಚ್ಚು ಯೋಜನೆಗಳು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದಾಗ, ಈ ಸಂಬಂಧ ಹಲವಾರು ಸಮಸ್ಯೆಗಳಿವೆ. ಹೀಗಾಗಿ ಯೋಜನೆಗಳು ಜಾರಿಯಾಗಿಲ್ಲ ಎಂದರು.

ಇತ್ತೀಚಿನ ಸಭೆಯಲ್ಲಿ ಈಗಾಗಲೇ 1.5 ಲಕ್ಷ ಕೋಟಿ ರೂ.ಗಳ ಒಂದು ಯೋಜನೆಯು ಕಾರ್ಯವನ್ನು ಪ್ರಾರಂಭಿಸಿದೆ. ಮುಂದಿನ 90 ದಿನಗಳಲ್ಲಿ ಹೆಚ್ಚಿನ ಯೋಜನೆಗಳಿಗೆ ಅನುಮತಿ ನೀಡಲು ಸರ್ಕಾರವು ಚಿಂತನೆ ನಡೆಸಿದೆ. ಶೇ.90 ರಷ್ಟು ಹೂಡಿಕೆಗಳು ಟೈರ್-2 ನಗರಗಳಿಗೆ ಹೋಗುತ್ತಿವೆ ಎಂದು ಮಾಹಿತಿ ನೀಡಿದರು.

ಉದ್ಯಮಶೀಲತೆಗೆ ಯುವಕರನ್ನು ಪ್ರೇರೇಪಿಸುವ ಸಲುವಾಗಿ ರಾಜ್ಯವು ಆರು ನಗರಗಳಲ್ಲಿ ‘ಉದ್ಯಮಿ ಲಘು ಉದ್ಯೋಗ ನೀಡು’ ಯೋಜನೆಯಡಿ ಕಾರ್ಯಕ್ರಮ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಆಸಕ್ತಿ ಹೊಂದಿರುವ 31,768 ಅಭ್ಯರ್ಥಿಗಳು ಭಾಗವಹಿಸಿದ್ದರು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT