ಶಿವಮೊಗ್ಗ: ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್. ಆರ್. ಕೇಶವಮೂರ್ತಿ ಇಂದು ವಿಧಿವಶರಾಗಿದ್ದಾರೆ.
ಶಿವಮೊಗ್ಗ ಮೂಲದ ಹೆಚ್. ಆರ್. ಕೇಶವಮೂರ್ತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
2022ರಲ್ಲಿ ಕೇಶವಮೂರ್ತಿ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.