ಸ್ಥಳದಲ್ಲಿ ಪೊಲೀಸರ ನಿಯೋಜನೆ 
ರಾಜ್ಯ

ದರ್ಗಾದ ಒಂದು ಭಾಗ ಕೆಡವಲು ಹುಬ್ಬಳ್ಳಿ ಮಹಾನಗರ ಪಾಲಿಕೆ ನಿರ್ಧಾರ: ಮುಸ್ಲಿಂ ಸಂಘಟನೆಗಳಿಂದ ವಿರೋಧ, ಸ್ಥಳದಲ್ಲಿ ಬಿಗುವಿನ ವಾತಾವರಣ, ಸೆಕ್ಷನ್ 144 ಜಾರಿ 

ಹುಬ್ಬಳ್ಳಿಯ ಬೈರಿದೇವರಕೊಪ್ಪ ದರ್ಗಾ ತೆರವು ಕಾರ್ಯಾಚರಣೆ ಮುಸ್ಲಿಂ ಸಮುದಾಯವನ್ನು ಕೆರಳಿಸಿದ್ದು ಸದ್ಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಸೆಕ್ಷನ್ 144 ಹೇರಲಾಗಿದೆ. 

ಹುಬ್ಬಳ್ಳಿ: ಹುಬ್ಬಳ್ಳಿಯ ಬೈರಿದೇವರಕೊಪ್ಪ ದರ್ಗಾ ತೆರವು ಕಾರ್ಯಾಚರಣೆ ಮುಸ್ಲಿಂ ಸಮುದಾಯವನ್ನು ಕೆರಳಿಸಿದ್ದು ಸದ್ಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಸೆಕ್ಷನ್ 144 ಹೇರಲಾಗಿದೆ. 

ನಗರದ ಬೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ಒಂದು ಭಾಗವನ್ನು ಕೆಡವಲಾಗುತ್ತಿದ್ದು ನಗರದಲ್ಲಿ ಇಂದು ಉದ್ವಿಗ್ನ ವಾತಾವರಣ ಉಂಟಾಗಿದೆ. ದರ್ಗಾ ಹಾಗೂ ಕೆಲವು ವಾಣಿಜ್ಯ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯಾಚರಣೆ ಬೆಳ್ಳಂಬೆಳಿಗ್ಗೆ ಆರಂಭವಾಯಿತು. ರಸ್ತೆ ಅಗಲೀಕರಣ ಹಿನ್ನೆಲೆ ಹಜರತ್ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ಒಂದು ಭಾಗವನ್ನು ತೆರವುಗೊಳಿಸಲಾಗುತ್ತಿದೆ.

ಅಭಿವೃದ್ಧಿ ಕಾಮಗಾರಿಗಾಗಿ ದರ್ಗಾದ ಒಂದು ಭಾಗವನ್ನು ಕೆಡವಲು ಸ್ಥಳೀಯ ಮಹಾನಗರ ಪಾಲಿಕೆ ನಿರ್ಧರಿಸಿದ್ದು, ಹುಬ್ಬಳ್ಳಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಹುಬ್ಬಳ್ಳಿ ಮತ್ತು ಧಾರವಾಡ ನಗರಗಳಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಹುಬ್ಬಳ್ಳಿ - ಧಾರವಾಡ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಪಕ್ಕದಲ್ಲೇ ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾ ಇದೆ. ದರ್ಗಾದ ಒಂದು ಭಾಗವನ್ನು ಕೆಡವಲು ಸ್ಥಳೀಯ ಮುಸ್ಲಿಮರ ಗುಂಪು ಆಕ್ಷೇಪಿಸಿದ ನಂತರ ಉದ್ವಿಗ್ನತೆ ಉಂಟಾಗಿದೆ.

ಇತ್ತೀಚೆಗೆ, ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ತೆಗೆದುಹಾಕಿತು. ದರ್ಗಾ ಉಸ್ತುವಾರಿಗಳು ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದು,  ಶಾಂತಿ ಕಾಪಾಡುವಂತೆ ಮತ್ತು ದ್ವಿಸದಸ್ಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT