ಬೆಸ್ಕಾಂ 
ರಾಜ್ಯ

ಬೆಸ್ಕಾಂ ನಕಲಿ ನೇಮಕಾತಿ ಹಗರಣದ ತನಿಖೆಗೆ ತಂಡ ರಚನೆ

ಬೆಸ್ಕಾಂ ನಕಲಿ ನೇಮಕಾತಿ ಹಗರಣದ ಗಂಭೀರತೆಯನ್ನು ಪರಿಗಣಿಸಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಅವರು ಬುಧವಾರ ತನಿಖೆಗಾಗಿ ಅಧಿಕಾರಿಗಳ ತಂಡವನ್ನು ರಚಿಸಿದ್ದಾರೆ.

ದಾವಣಗೆರೆ/ಚಿತ್ರದುರ್ಗ: ಬೆಸ್ಕಾಂ ನಕಲಿ ನೇಮಕಾತಿ ಹಗರಣದ ಗಂಭೀರತೆಯನ್ನು ಪರಿಗಣಿಸಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಅವರು ಬುಧವಾರ ತನಿಖೆಗಾಗಿ ಅಧಿಕಾರಿಗಳ ತಂಡವನ್ನು ರಚಿಸಿದ್ದಾರೆ.

ಬೆಸ್ಕಾಂ ಹಗರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಬೆಂಗಳೂರು ಗ್ರಾಮಾಂತರ ವಿಭಾಗದ ಖಾತೆ ನಿಯಂತ್ರಣಾಧಿಕಾರಿ ಜಿ ಆರ್ ಗಂಗಾಧರ ರೆಡ್ಡಿ ನೇತೃತ್ವದ ತಂಡದಿಂದ ತನಿಖೆ ನಡೆಸಲಾಗುವುದು ಎಂದು ಬೀಳಗಿ ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಎಲ್ಲಾ ಬೆಸ್ಕಾಂ ವಿಭಾಗಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಅನುಕಂಪದ ಆಧಾರದ ಮೇಲೆ ನಡೆದ ಎಲ್ಲಾ ನೇಮಕಾತಿಗಳನ್ನು ಪರಿಶೀಲಿಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ತನಿಖಾ ತಂಡಕ್ಕೆ ಸೂಚಿಸಲಾಗಿದೆ.

ವರದಿ ಆಧರಿಸಿ ಆರೋಪಿಗಳ ವಿರುದ್ಧ ಕ್ರಿಮಿನಲ್‌ ಕ್ರಮ ಜರುಗಿಸಲಾಗುವುದು. ಆರೋಪಿಗಳಿಂದ ಬೆಸ್ಕಾಂಗೆ ಆಗಿರುವ ನಷ್ಟವನ್ನು ವಸೂಲಿ ಮಾಡಲಾಗುವುದು ಬೀಳಗಿ ತಿಳಿಸಿದ್ದಾರೆ.

ಹಗರಣಕ್ಕೆ ಸಂಬಂಧಿಸಿದಂತೆ ಸೂಪರಿಂಟೆಂಡೆಂಟ್ ಎಂಜಿನಿಯರ್ ಎಸ್ ಟಿ ಶಾಂತಮಲ್ಲಪ್ಪ ಅವರನ್ನು ಅಮಾನತುಗೊಳಿಸಲಾಗಿದ್ದು, ಇತರ ಆರೋಪಿ ಅಧಿಕಾರಿಗಳನ್ನೂ ಅಮಾನತು ಮಾಡಲಾಗಿದೆ ಎಂದು ಬೀಳಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT