ಗೃಹ ಸಚಿವ ಆರಗ ಜ್ಞಾನೇಂದ್ರ 
ರಾಜ್ಯ

ಗಡಿ ವಿವಾದ: ಮಹಾರಾಷ್ಟ್ರ, ಕರ್ನಾಟಕ ನಾಯಕರು ಸಂಯಮ ಕಾಯ್ದುಕೊಳ್ಳಬೇಕು; ಗೃಹ ಸಚಿವ ಆರಗ ಜ್ಞಾನೇಂದ್ರ

ಗಡಿ ವಿವಾದ ಸಂಬಂಧ ರಾಜಕೀಯ ನಾಯಕರು ಜನಜೀವನ ಅಸ್ತವ್ಯಸ್ತಗೊಳಿಸುವ ಹೇಳಿಕೆಗಳನ್ನು ನೀಡಬಾರದು. ಎರಡೂ ರಾಜ್ಯಗಳ ನಾಯಕರು ಸಂಯಮ ಕಾಯ್ದುಕೊಳ್ಳಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದರು.

ಬೆಳಗಾವಿ: ಗಡಿ ವಿವಾದ ಸಂಬಂಧ ರಾಜಕೀಯ ನಾಯಕರು ಜನಜೀವನ ಅಸ್ತವ್ಯಸ್ತಗೊಳಿಸುವ ಹೇಳಿಕೆಗಳನ್ನು ನೀಡಬಾರದು. ಎರಡೂ ರಾಜ್ಯಗಳ ನಾಯಕರು ಸಂಯಮ ಕಾಯ್ದುಕೊಳ್ಳಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದರು.

ಚೀನಾ ಭಾರತದ ಗಡಿ ಹೇಗೆ ಪ್ರವೇಶಿಸಿತ್ತೋ ಹಾಗೆಯೇ ಮಹಾರಾಷ್ಟ್ರ ಕೂಡ ಕರ್ನಾಟಕದ ಗಡಿ ನುಗ್ಗಲಿದೆ ಎಂಬ ಶಿವಸೇನ ನಾಯಕ ಸಂಜಯ್ ರಾವತ್ ಅವರ ಹೇಳಿಕೆಗೆ ಗೃಹ ಸಚಿವರು ನಿನ್ನೆ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಸಭೆಯನ್ನು ಸ್ಮರಿಸಿದ ಸಚಿವರು, ಇಂತಹ ಕ್ಷಣಗಳಲ್ಲಿ ನಾಯಕರು ಸಂಯಮ ತೋರಿಸಬೇಕು ಮತ್ತು ಎರಡೂ ರಾಜ್ಯಗಳ ನಾಯಕರು ಕಾನೂನು ಖಾತ್ರಿಪಡಿಸಲು ಕಠಿಣ ಕ್ರಮಗಳನ್ನು ಪ್ರಾರಂಭಿಸಬೇಕು ಎಂದು ಹೇಳಿದರು.

ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ, ಗೊಂದಲಕ್ಕೆ ಕಾರಣವಾದ ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆ ಅಮಿತ್ ಶಾ ಅವರು ಎರಡೂ ರಾಜ್ಯಗಳಿಗೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT