ಸಂಸತ್ತು 
ರಾಜ್ಯ

ಕರ್ನಾಟಕದ ಬೆಟ್ಟ-ಕುರುಬ ಸಮುದಾಯ ಎಸ್ ಟಿಗೆ ಸೇರ್ಪಡೆ, ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

ಕರ್ನಾಟಕದ "ಕಾಡು ಕುರುಬ" ಜೊತೆಗೆ "ಬೆಟ್ಟ-ಕುರುಬ" ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಮಸೂದೆಯನ್ನು ಸಂಸತ್ತು ಗುರುವಾರ ಅಂಗೀಕರಿಸಿದೆ.

ನವದೆಹಲಿ: ಕರ್ನಾಟಕದ "ಕಾಡು ಕುರುಬ" ಜೊತೆಗೆ "ಬೆಟ್ಟ-ಕುರುಬ" ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಮಸೂದೆಯನ್ನು ಸಂಸತ್ತು ಗುರುವಾರ ಅಂಗೀಕರಿಸಿದೆ.

ಲೋಕಸಭೆ ಅಂಗೀಕಾರಗೊಂಡಿದ್ದ ಮಸೂದೆಯನ್ನ ಇಂದು ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಸಂವಿಧಾನ(ಪರಿಶಿಷ್ಟ ಬುಡಕಟ್ಟು) ಆದೇಶ (ನಾಲ್ಕನೇ ತಿದ್ದುಪಡಿ) ಮಸೂದೆ, 2022 ಅನ್ನು ಅಂಗೀಕರಿಸಲಾಯಿತು.

ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಮೇಲ್ಮನೆಯಲ್ಲಿ ಮಂಡಿಸಿದ ಮಸೂದೆಯನ್ನು ಲೋಕಸಭೆಯು ಡಿಸೆಂಬರ್ 19 ರಂದು ಅಂಗೀಕರಿಸಿತ್ತು.

ಈ ಮಸೂದೆ ದಕ್ಷಿಣ ರಾಜ್ಯದಲ್ಲಿ ಕೇವಲ 5,000 ಸದಸ್ಯರನ್ನು ಹೊಂದಿರುವ ಕರ್ನಾಟಕದ ಬೆಟ್ಟ-ಕುರುಬ ಸಮುದಾಯಕ್ಕೆ ನ್ಯಾಯ ಒದಗಿಸಲಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

‘ಬೆಟ್ಟ-ಕುರುಬ’ ಸಮುದಾಯವನ್ನು ಕರ್ನಾಟಕದ ಪರಿಶಿಷ್ಟ ಪಂಗಡಗಳ ಪಟ್ಟಿಗೆ ‘ಕಾಡು ಕುರುಬ’ ಎಂಬ ಪದಕ್ಕೆ ಸಮಾನಾರ್ಥಕ ಪದವಾಗಿ ಸೇರಿಸಲು ಕರ್ನಾಟಕ ರಾಜ್ಯ ಸರ್ಕಾರ ಮನವಿ ಮಾಡಿತ್ತು ಎಂದು ಮಸೂದೆಯ ಉದ್ದೇಶ ಮತ್ತು ಕಾರಣಗಳನ್ನು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿಪಕ್ಷದ ಸದಸ್ಯರು ಪ್ರಸ್ತಾಪಿಸಿದ ವಿಷಯಗಳಿಗೆ ಪ್ರತಿಕ್ರಿಯಿಸಿದ ಮುಂಡಾ, ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಕಾಂಗ್ರೆಸ್ ಏನೂ ಮಾಡಿಲ್ಲ ಮತ್ತು ಈಗ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಆರೋಪಿಸಿದರು. ಸಮಾಜದ ಎಲ್ಲ ವರ್ಗದವರಿಗೂ ನ್ಯಾಯ ಕೊಡಿಸಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮುಂಡಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT