ಸಂಸತ್ತು 
ರಾಜ್ಯ

ಕರ್ನಾಟಕದ ಬೆಟ್ಟ-ಕುರುಬ ಸಮುದಾಯ ಎಸ್ ಟಿಗೆ ಸೇರ್ಪಡೆ, ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

ಕರ್ನಾಟಕದ "ಕಾಡು ಕುರುಬ" ಜೊತೆಗೆ "ಬೆಟ್ಟ-ಕುರುಬ" ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಮಸೂದೆಯನ್ನು ಸಂಸತ್ತು ಗುರುವಾರ ಅಂಗೀಕರಿಸಿದೆ.

ನವದೆಹಲಿ: ಕರ್ನಾಟಕದ "ಕಾಡು ಕುರುಬ" ಜೊತೆಗೆ "ಬೆಟ್ಟ-ಕುರುಬ" ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಮಸೂದೆಯನ್ನು ಸಂಸತ್ತು ಗುರುವಾರ ಅಂಗೀಕರಿಸಿದೆ.

ಲೋಕಸಭೆ ಅಂಗೀಕಾರಗೊಂಡಿದ್ದ ಮಸೂದೆಯನ್ನ ಇಂದು ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಸಂವಿಧಾನ(ಪರಿಶಿಷ್ಟ ಬುಡಕಟ್ಟು) ಆದೇಶ (ನಾಲ್ಕನೇ ತಿದ್ದುಪಡಿ) ಮಸೂದೆ, 2022 ಅನ್ನು ಅಂಗೀಕರಿಸಲಾಯಿತು.

ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಮೇಲ್ಮನೆಯಲ್ಲಿ ಮಂಡಿಸಿದ ಮಸೂದೆಯನ್ನು ಲೋಕಸಭೆಯು ಡಿಸೆಂಬರ್ 19 ರಂದು ಅಂಗೀಕರಿಸಿತ್ತು.

ಈ ಮಸೂದೆ ದಕ್ಷಿಣ ರಾಜ್ಯದಲ್ಲಿ ಕೇವಲ 5,000 ಸದಸ್ಯರನ್ನು ಹೊಂದಿರುವ ಕರ್ನಾಟಕದ ಬೆಟ್ಟ-ಕುರುಬ ಸಮುದಾಯಕ್ಕೆ ನ್ಯಾಯ ಒದಗಿಸಲಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

‘ಬೆಟ್ಟ-ಕುರುಬ’ ಸಮುದಾಯವನ್ನು ಕರ್ನಾಟಕದ ಪರಿಶಿಷ್ಟ ಪಂಗಡಗಳ ಪಟ್ಟಿಗೆ ‘ಕಾಡು ಕುರುಬ’ ಎಂಬ ಪದಕ್ಕೆ ಸಮಾನಾರ್ಥಕ ಪದವಾಗಿ ಸೇರಿಸಲು ಕರ್ನಾಟಕ ರಾಜ್ಯ ಸರ್ಕಾರ ಮನವಿ ಮಾಡಿತ್ತು ಎಂದು ಮಸೂದೆಯ ಉದ್ದೇಶ ಮತ್ತು ಕಾರಣಗಳನ್ನು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರತಿಪಕ್ಷದ ಸದಸ್ಯರು ಪ್ರಸ್ತಾಪಿಸಿದ ವಿಷಯಗಳಿಗೆ ಪ್ರತಿಕ್ರಿಯಿಸಿದ ಮುಂಡಾ, ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ಕಾಂಗ್ರೆಸ್ ಏನೂ ಮಾಡಿಲ್ಲ ಮತ್ತು ಈಗ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಆರೋಪಿಸಿದರು. ಸಮಾಜದ ಎಲ್ಲ ವರ್ಗದವರಿಗೂ ನ್ಯಾಯ ಕೊಡಿಸಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮುಂಡಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT