ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೋವಿಡ್-19 ಉಲ್ಭಣ ಸಾಧ್ಯತೆ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ತಾಂತ್ರಿಕ ಸಲಹಾ ಸಮಿತಿ ಸಲಹೆ

ಚೀನಾ, ಜಪಾನ್, ಬ್ರೆಜಿಲ್, ಯುಎಸ್ ಮತ್ತು ಕೊರಿಯಾದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಗೊಂಡಿದ್ದು, ರಾಜ್ಯದಲ್ಲೂ ಮಹಾಮಾರಿ ಕುರಿತು ಆತಂಕಗಳು ಹೆಚ್ಚಾಗತೊಡಗಿವೆ. ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವಂತೆ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ.

ಬೆಂಗಳೂರು: ಚೀನಾ, ಜಪಾನ್, ಬ್ರೆಜಿಲ್, ಯುಎಸ್ ಮತ್ತು ಕೊರಿಯಾದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಗೊಂಡಿದ್ದು, ರಾಜ್ಯದಲ್ಲೂ ಮಹಾಮಾರಿ ಕುರಿತು ಆತಂಕಗಳು ಹೆಚ್ಚಾಗತೊಡಗಿವೆ. ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವಂತೆ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ.

ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಅಧ್ಯಕ್ಷ ಡಾ ಎಂ ಕೆ ಸುದರ್ಶನ್ ಅವರು ಮಾತನಾಡಿ, ಇದು ಖಂಡಿತವಾಗಿಯೂ ಆತಂಕಕಾರಿ ಬೆಳವಣಿಗೆಯಾಗಿದೆ.  ರಾಜ್ಯವು ಕೂಡಲೇ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವುದು ಅಗತ್ಯವಿದೆ. ಮೊದಲನೆಯದಾಗಿ ಮಾಸ್ಕ್ ಕಡ್ಡಾಯ, ಎರಡನೆಯದಾಗಿ, ಬೂಸ್ಟರ್ ಡೋಸ್‌ಗಳ ನೀಡುವುದು ಮತ್ತು ಮೂರನೆಯದಾಗಿ ರೋಗಲಕ್ಷಣಗಳನ್ನು ಹೊಂದಿರುವ ಜನರನ್ನು ಪರೀಕ್ಷಿಸುವ ಕೆಲಸವನ್ನು ಸರ್ಕಾರ ಮಾಡಬೇಕೆಂದು ಹೇಳಿದ್ದಾರೆ.

ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರ ಮೊದಲು ಬೂಸ್ಟರ್ ಡೋಸ್ ಲಸಿಕೆ ನೀಡುವಿಕೆಯನ್ನು ಹೆಚ್ಚಿಸಬೇಕು. ಕೋವಿಡ್ ಲಸಿಕೆಯನ್ನು ಎರಡು ಡೋಸ್ ಪಡೆದ ಎಲ್ಲರೂ ತಕ್ಷಣವೇ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು, ಅದನ್ನು ಖರೀದಿಸಿ ರಾಜ್ಯದಾದ್ಯಂತ ಜನರಿಗೆ ಲಭ್ಯವಾಗುವಂತೆ ಮಾಡಬೇಕು. ಮುಂದೆ, ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ರೋಗಲಕ್ಷಣಗಳನ್ನು ಇರುವವರನ್ನು ಕೂಡಲೇ ಪರೀಕ್ಷೆಗೊಳಪಡಿಸಿ, ಐಸೋಲೇಷನ್ ನಲ್ಲಿ ಇರಿಸಬೇಕು. ಮಾಸ್ಕ್‌ಗಳನ್ನು ಕಡ್ಡಾಯಗೊಳಿಸುವುದು ಪ್ರಮುಖವಾಗಿದೆ. ಎಲ್ಲಾ ಮುಚ್ಚಿದ ಸ್ಥಳಗಳಲ್ಲಿ ಮತ್ತು ಒಳಾಂಗಣದಲ್ಲಿ ಮಾಸ್ಕ್ ಕಡ್ಡಾಯ ಮಾಡಬೇಕು ಎಂದು ತಿಳಿಸಿದ್ದಾರೆ.

ಇದೇ ವೇಳೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯಗಳಿಗೆ ಬರೆದ ಪತ್ರವನ್ನು ಉಲ್ಲೇಖಿಸಿದ ಡಾ ಸುದರ್ಶನ್ ಅವರು, ಪಾಸಿಟಿವ್ ಬಂದ ಜನರ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಳಿಗಾಗಿ ಜೀನೋಮಿಕ್ ಅನುಕ್ರಮಕ್ಕಾಗಿ ಕಳುಹಿಸಬೇಕು ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT