ಅಕೈ ಪದ್ಮಶಾಲಿ 
ರಾಜ್ಯ

ಸಲಿಂಗ ವಿವಾಹ ಕುರಿತು ಹೇಳಿಕೆ: ಕ್ಷಮೆಯಾಚಿಸುವಂತೆ ಸುಶೀಲ್​ ಕುಮಾರ್ ಮೋದಿಗೆ ಅಕೈ ಪದ್ಮಶಾಲಿ ಆಗ್ರಹ

ಸಲಿಂಗ ವಿವಾಹ ಕುರಿತು ಇತ್ತೀಚೆಗೆ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ ಅವರು ಕ್ಷಮೆಯಾಚಿಸಬೇಕೆಂದು ಲೈಂಗಿಕ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಅಕೈ ಪದ್ಮಶಾಲಿ ಅವರು ಶನಿವಾರ ಆಗ್ರಹಿಸಿದ್ದಾರೆ.

ಬೆಂಗಳೂರು: ಸಲಿಂಗ ವಿವಾಹ ಕುರಿತು ಇತ್ತೀಚೆಗೆ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ ಅವರು ಕ್ಷಮೆಯಾಚಿಸಬೇಕೆಂದು ಲೈಂಗಿಕ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಅಕೈ ಪದ್ಮಶಾಲಿ ಅವರು ಶನಿವಾರ ಆಗ್ರಹಿಸಿದ್ದಾರೆ.

ರಾಜ್ಯಸಭೆ ಕಲಾಪದ ಸಂದರ್ಭ ಶೂನ್ಯ ವೇಳೆಯಲ್ಲಿ ಮಾತನಾಡಿದ್ದ ಸುಶೀಲ್ ಕುಮಾರ್ ಮೋದಿ ಸಲಿಂಗ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಕೆಲವು ಮಂದಿ ಉದಾರವಾದಿಗಳು ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ದೊರಕಿಸಿಕೊಡಲು ಹೋರಾಟ ಮಾಡುತ್ತಿದ್ದಾರೆ. ಇಂತಹ ಕಾನೂನು ರೂಪಿಸುವುದರಿಂದ ದೇಶದ ಸಂಸ್ಕೃತಿಗೆ ಧಕ್ಕೆಯಾಗಲಿದೆ. ಹೀಗಾಗಿ ಈ ವಿಚಾರವಾಗಿ ನ್ಯಾಯಾಂಗವು ಯಾವುದೇ ತೀರ್ಪು ನೀಡಬಾರದು ಎಂದು ಹೇಳಿದ್ದರು.

ಜತೆಗೆ, ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ದೊರಕಿಸಿಕೊಡಲು ನಡೆಯುವ ಹೋರಾಟವನ್ನು ಸರ್ಕಾರ ತೀವ್ರವಾಗಿ ವಿರೋಧಿಸಬೇಕು. ಈ ವಿಚಾರವಾಗಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಬೇಕು. ಬಿಜೆಪಿಯಂತೂ ಸಲಿಂಗ ವಿವಾಹವನ್ನು ಒಪ್ಪುವುದಿಲ್ಲ ಎಂದು ಹೇಳಿದ್ದರು.

ಈ ಹೇಳಿಕೆಗೆ ಅಕೈ ಪದ್ಮಶಾಲಿ ವಿರೋಧ ವ್ಯಕ್ತಪಡಿಸಿದ್ದು, ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

ನನ್ನಂತೆಯೇ ಜೈವಿಕವಾಗಿ ಪುರುಷರಲ್ಲದ, ಮಹಿಳೆಯೂ ಅಲ್ಲದ ಅನೇಕರಿದ್ದಾರೆ. ಜೈವಿಕವಾಗಿ ಪುರುಷ ಮತ್ತು ಮಹಿಳೆಯಾಗಿದ್ದರೆ ಮಾತ್ರ ಮದುವೆಯಾಗಬಹುದೇ? ಇದು ಸಮಾನತೆ, ಘನತೆ ಮತ್ತು ಒಳಗೊಳ್ಳುವಿಕೆಯ ನಮ್ಮ ಸಾಂವಿಧಾನಿಕ ಆಶಯವನ್ನು ಉಲ್ಲಂಘಿಸಿದಂತೆ ಅಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಟೀಕೆಗಳ ಮೂಲಕ ನೀವು ಎಲ್​ಜಿಬಿಟಿ ಸಮುದಾಯಕ್ಕೆ ಉಂಟುಮಾಡಿದ ನೋವಿಗೆ ಸಮುದಾಯದ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT