ರಾಜ್ಯ

ರಾಯಚೂರಿನಲ್ಲಿ ರೈಲಿಗೆ ತಲೆಕೊಟ್ಟು ಕರ್ನೂಲ್ ನ ಜೋಡಿ ಆತ್ಮಹತ್ಯೆ

Vishwanath S

ರಾಯಚೂರು: ತಮ್ಮ ಮದುವೆಗೆ ಪೋಷಕರು ಒಪ್ಪಿಗೆ ನೀಡದ ಕಾರಣಕ್ಕೆ ಪ್ರೇಮಿಗಳಿಬ್ಬರು ರೈಲಿನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರ್ನಾಟಕದ ರಾಯಚೂರಿನಲ್ಲಿ ನಡೆದಿದೆ. 

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪರಲಪಲ್ಲೆ ಮತ್ತು ಕಂದವತಿ ಗ್ರಾಮದ ಅನಿತಾ ಮತ್ತು ಶಿವಕುಮಾರ್ ಪರಸ್ಪರ ಪ್ರೀತಿಸುತ್ತಿದ್ದರು. ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಮದುವೆಯಾಗಲು ನಿರಾಕರಿಸಿದರು. 

ಈ ಹಿನ್ನೆಲೆಯಲ್ಲಿ ಈ ಜೋಡಿ ಕರ್ನಾಟಕಕ್ಕೆ ಬಂದು ನೆಲೆಸಿತ್ತು. ರಾಯಚೂರು ಜಿಲ್ಲೆಯ ಯಾದಗಿರಿ ಬಳಿ ಶನಿವಾರ ರಾತ್ರಿ ರೈಲಿಗೆ ಸಿಲುಕಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

SCROLL FOR NEXT