ಪುನೀತ್ ರಾಜ್ ಕುಮಾರ್ ಪಠ್ಯ 
ರಾಜ್ಯ

ವಿವಿ ಪಠ್ಯದಲ್ಲಿ ನಟ ಪುನೀತ್‌ ಜೀವನಗಾಥೆ: ಇದು ಸರ್ಕಾರ ಕಲಾವಿದರಿಗೆ ಕೊಡುವ ಗೌರವದ ಸಂಕೇತ ಎಂದ ಬಿಜೆಪಿ!

ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಕಳೆದ ವರ್ಷ ನಿಧನರಾದ ಕನ್ನಡ ಚಿತ್ರರಂಗದ ಹೆಸರಾಂತ ನಟ ಪುನೀತ್‌ ರಾಜಕುಮಾರ್ ಜೀವನಗಾಥೆಯನ್ನು ರಾಜ್ಯ ಸರ್ಕಾರ ಸರ್ಕಾರ ಸೇರಿಸಿದೆ.

ಬೆಂಗಳೂರು:  ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಕಳೆದ ವರ್ಷ ನಿಧನರಾದ ಕನ್ನಡ ಚಿತ್ರರಂಗದ ಹೆಸರಾಂತ ನಟ ಪುನೀತ್‌ ರಾಜಕುಮಾರ್ ಜೀವನಗಾಥೆಯನ್ನು ರಾಜ್ಯ ಸರ್ಕಾರ ಸರ್ಕಾರ ಸೇರಿಸಿದೆ.

 ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದ ನೀನೇ ರಾಜಕುಮಾರ ಕೃತಿಯ ಒಂದು ಅದ್ಯಾಯವಾದ 'ಲೋಹಿತ ಎಂಬ ಮರಿಮುದ್ದ ಎಂಬ ಆಯ್ದ ಭಾಗವನ್ನು  ಬಿಕಾಂ 3ನೇ ಸೆಮಿಸ್ಟರ್‌ನಲ್ಲಿ ಪಠ್ಯವಾಗಿ ಸೇರ್ಪಡೆಗೊಳಿಸಲಾಗಿದೆ.  

ನಟನೆ ಜೊತೆಗೆ ಸರಳತೆ, ಸಮಾಜ ಮುಖಿ ಕಾರ್ಯಗಳಿಂದ ಹಲವರಿಗೆ ಸ್ಪೂರ್ತಿಯಾಗಿದ್ದ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಅವರ ಜೀವನಗಾಥೆಯನ್ನು ಪಠ್ಯದಲ್ಲಿ ಸೇರಿಸಬೇಕೆಂದು ಅಪ್ಪು ಅಭಿಮಾನಿಗಳು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದರು. ಶಿಕ್ಷಣ ಸಚಿವರಿಗೂ ಮನವಿ ಪತ್ರ ಸಲ್ಲಿಸಿದ್ದರು. ಅದರಂತೆ ಇದೀಗ ಅವರ ಬೇಡಿಕೆ ಈಡೇರಿದ್ದು, ಪುನೀತ್ ಜೀವನಗಾಥೆಯನ್ನು ಪಠ್ಯ ಪುಸ್ತಕದಲ್ಲಿ ಸೇರ್ಪಡೆ ಮಾಡಲಾಗಿದೆ.

ಈ ಕುರಿತು ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, ಇದು  ಸರ್ಕಾರ ಕಲಾವಿದರಿಗೆ ಕೊಡುವ ಗೌರವದ ಸಂಕೇತ ಎಂದು ಬಿಜೆಪಿ ಹೇಳಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!