ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಯ್ಯ, ತೋಟಗಾರಿಕೆ ಸಚಿವ ಎನ್ ಮುನಿರತ್ನ (ಸಂಗ್ರಹ ಚಿತ್ರ) 
ರಾಜ್ಯ

40% ಕಮಿಷನ್ ಆರೋಪ: ದಾಖಲೆ ಒದಗಿಸದಿದ್ದರೇ ಮುಂದಿನ ದಿನಗಳಲ್ಲಿ ಇನ್ನೂ ಕಷ್ಟವಾಗುತ್ತೆ: ಕೆಂಪಣ್ಣಗೆ ಮುನಿರತ್ನ ಎಚ್ಚರಿಕೆ

40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಒದಗಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕಷ್ಟವಾಗುತ್ತೆ. ದಾಖಲೆ ಕೊಡಲಿಲ್ಲವೆಂದರೆ ಎರಡು ವರ್ಷ ಶಿಕ್ಷೆ ಆಗುತ್ತದೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಎಚ್

ಕೋಲಾರ: 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಒದಗಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕಷ್ಟವಾಗುತ್ತೆ. ದಾಖಲೆ ಕೊಡಲಿಲ್ಲವೆಂದರೆ ಎರಡು ವರ್ಷ ಶಿಕ್ಷೆ ಆಗುತ್ತದೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಎಚ್ಚರಿಕೆ ಕೊಟ್ಟಿದ್ದಾರೆ.

ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುನಿರತ್ನ ಅವರು, ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna) ಆರೋಪ ಮಾಡಿದ ಮೇಲೆ ದಾಖಲೆ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನೂ ಕಷ್ಟವಾಗುತ್ತೆ. ದಾಖಲೆ ಕೊಡಲಿಲ್ಲವೆಂದರೆ ಎರಡು ವರ್ಷ ಶಿಕ್ಷೆ ಆಗುತ್ತದೆ. ಆರೋಪ ಮಾಡಿ ಒಂದು ವರ್ಷ ಆಗಿದೆ, ಅದಕ್ಕೆ ದಾಖಲೆ ನೀಡಬೇಕು, ಆದರೆ ಒದಗಿಸಿಲ್ಲ. ಹೀಗಾಗಿ ನ್ಯಾಯಾಲಯದಿಂದ ಸಮನ್ಸ್ ಬಂತು, ಸಮನ್ಸ್ ಬಂದು ದಾಖಲೆ ಕೊಡದಿದ್ದರಿಂದ ವಾರೆಂಟ್ ಬಂತು. ಅದನ್ನು ಅರ್ಥ ಮಾಡಿಕೊಳ್ಳಬೇಕು. ಆರೋಪ ಮಾಡಿದ ಮೇಲೆ ಜೀರ್ಣ ಮಾಡಿಕೊಳ್ಳುವ ಶಕ್ತಿ ಇರಬೇಕು ಎಂದರು.

ರಾಜರಾಜೇಶ್ವರಿ ಕ್ಷೇತ್ರದಲ್ಲಿ 10 ಸಾವಿರ ಕೋಟಿ ಖರ್ಚು, ಹಾಗೂ 40% ಕಮಿಷನ್ ಎಲ್ಲಿ ಆಗಿದೆ ತೋರಿಸಬೇಕು. ದಾಖಲೆ ತೋರಿಸುವವರೆಗೂ ನಾನು ಬಿಡುವುದಿಲ್ಲ. ಆದಷ್ಟು ಬೇಗ ಈ ಪ್ರಕರಣ ಮುಗಿಸಲು ಕೋರ್ಟಿಗೆ ಅರ್ಜಿ ಸಲ್ಲಿಕೆ ಮಾಡುವೆ. ಇದು ಇಷ್ಟಕ್ಕೆ ನಿಲ್ಲುವುದಿಲ್ಲ, ಇನ್ನು ಮುಂದೆ ಇದೆ. ಖಂಡಿತವಾಗಲೂ ಹೇಳುತ್ತಿರುವೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಅವರು ಸಿದ್ದರಾಮಯ್ಯ ಅವರ ಮಾತು ಕೇಳುತ್ತಾರೆ. ಹಾಗಿದ್ದರೆ ಅಸೆಂಬ್ಲಿ ನಡೆಯುತ್ತಿದೆ ಸಿದ್ದರಾಮಯ್ಯ ಅವರಿಗೆ ದಾಖಲೆಗಳ ಕೊಟ್ಟು ಅಸೆಂಬ್ಲಿಯಲ್ಲಿ ಧ್ವನಿ ಎತ್ತಲಿ. ಕಾನೂನು ಚೌಕಟ್ಟಿನಲ್ಲಿ ಏನೂ ಕ್ರಮ ಕೈಗೊಳ್ಳಬೇಕು ಅದೆಲ್ಲ ಮಾಡುವೆ ಎಂದು ಮುನಿರತ್ನ ತಿಳಿಸಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್