ಅಕ್ಷಯ್ ಕುಮಾರ್ 
ರಾಜ್ಯ

ಹುಬ್ಬಳ್ಳಿ ಧಾರವಾಡದಲ್ಲಿ ರಾಷ್ಟ್ರೀಯ ಯುವ ಜನೋತ್ಸವ: ನಟ ಅಕ್ಷಯ್ ಕುಮಾರ್ ಗೆ ಆಹ್ವಾನ

ಅವಳಿ ನಗರ ಹುಬ್ಬಳ್ಳಿ- ಧಾರವಾಡದಲ್ಲಿ ಜನವರಿ 12ರಿಂದ 16ರವರೆಗೆ ನಡೆಯಲಿರುವ  ರಾಷ್ಟ್ರೀಯ ಯುವ ಜನೋತ್ಸವಕ್ಕೆ ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ.

ಧಾರವಾಡ: ಅವಳಿ ನಗರ ಹುಬ್ಬಳ್ಳಿ- ಧಾರವಾಡದಲ್ಲಿ ಜನವರಿ 12ರಿಂದ 16ರವರೆಗೆ ನಡೆಯಲಿರುವ  ರಾಷ್ಟ್ರೀಯ ಯುವ ಜನೋತ್ಸವಕ್ಕೆ ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ.

ಧಾರವಾಡದ ವಿವಿಧ ಕಡೆಗಳಲ್ಲಿ ಯುವ ಜನೋತ್ಸವ ಆಯೋಜನೆ ಮಾಡಲು ಸೂಕ್ತ ಸ್ಥಳ ವೀಕ್ಷಣೆ ನಂತರ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ನಡೆಸುವಾಗಲೇ  ಅಕ್ಷಯ್ ಕುಮಾರ್ ಅವರಿಗೆ ಕರೆ ಮಾಡಿ, ಯುವಜನೋತ್ಸವಕ್ಕೆ ಆಹ್ವಾನಿಸಿದರು. ಜ. 16ರಂದು ನಡೆಯುವ ಸಮಾರೋಪಕ್ಕೆ ಆಗಮಿಸುವಂತೆ ಜೋಶಿ, ಅಕ್ಷಯ ಕುಮಾರ್​ಗೆ ಹೇಳಿದರು. ಆದರೆ  ಜ. 12ರಂದೇ ಬರುತ್ತೇನೆ ಎಂದು ಅಕ್ಷಯ್ ಕುಮಾರ್ ಹೇಳಿದರು. ಆದರೆ ಪ್ರಧಾನಿ ಕಾರ್ಯಕ್ರಮ ಭದ್ರತೆ ವಿಷಯ ಇರುತ್ತೆ ಎಂದು ಜೋಶಿ ಹೇಳಿದರು.

ಐದು ದಿನಗಳ ಕಾರ್ಯಕ್ರಮಕ್ಕೆ ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದು, ವಿವಿಧ ರಾಜ್ಯಗಳಿಂದ ಸುಮಾರು 7,500 ಪ್ರತಿನಿಧಿಗಳು ಇದರಲ್ಲಿ ಭಾಗಿಯಾಗುತ್ತಾರೆ. ಅಂದು ನಾಡು ನುಡಿ ನಮ್ಮ ಸಾಂಸ್ಕೃತಿಕ ಬಿಂಬಿಸುವ ಅನೇಕ ಜಾನಪದ, ಸಾಂಸ್ಕೃತಿಕ ಕಾರ್ಯಕ್ರಮಗಳು, ಆಹಾರ ಮೇಳಗಳು ಸಹ ಇರುತ್ತವೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT