ಸಂಗ್ರಹ ಚಿತ್ರ 
ರಾಜ್ಯ

ಕರ್ನಾಕಟದಲ್ಲೂ ಒಮಿಕ್ರಾನ್ BF.7 ಭೀತಿ: ವಿದೇಶದಿಂದ ಬೆಂಗಳೂರಿಗೆ ಬಂದ 7 ಮಂದಿ ಪ್ರಯಾಣಿಕರಿಗೆ ಕೋವಿಡ್ ಸೋಂಕು

ಚೀನಾದಲ್ಲಿ ವ್ಯಾಪಕವಾಗಿ ಅಬ್ಬರಿಸುತ್ತಿರುವ ಕೋವಿಡ್-19 ರೂಪಾಂತರ ಸೋಂಕು ಒಮಿಕ್ರಾನ್ BF.7 ಭೀತಿ ನಡುವೆಯೇ ಇಂದು ವಿದೇಶಗಳಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರ ಪೈಕಿ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಚೀನಾದಲ್ಲಿ ವ್ಯಾಪಕವಾಗಿ ಅಬ್ಬರಿಸುತ್ತಿರುವ ಕೋವಿಡ್-19 ರೂಪಾಂತರ ಸೋಂಕು ಒಮಿಕ್ರಾನ್ BF.7 ಭೀತಿ ನಡುವೆಯೇ ಇಂದು ವಿದೇಶಗಳಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರ ಪೈಕಿ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಚೀನಾದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ರಾಜ್ಯದ ಎಲ್ಲ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಅದರಂತೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಚ್ರೀಯ ವಿಮಾನ ನಿಲ್ದಾಣಕ್ಕೆ ಕಳೆದ 24 ಗಂಟೆಗಳ ಅವಧಿಯಲ್ಲಿ ಬಂದಿಳಿದಿದ್ದ ಪ್ರಯಾಣಿಕರ ಪೈಕಿ 7 ಮಂದಿಯ ಆರ್ ಟಿಪಿಸಿಆರ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು ಇದು ಒಮಿಕ್ರಾನ್ BF.7 ರೂಪಾಂತರ ಸೊಂಕೆ ಎಂಬ ಭೀತಿ ಹಬ್ಬಿದೆ.

ಮುಂಜಾಗ್ರತಾ ಕ್ರಮವಾಗಿ ಈ 8 ಮಂದಿಯ ಮಾದರಿಯನ್ನು ಜೆನೋಮ್ ಸೀಕ್ವಿನ್ಸಿಂಗ್ ಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ನವೆಂಬರ್ ನಲ್ಲಿ ಕೆಐಎನಲ್ಲಿ 8 ಮಂದಿ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬಂದಿತ್ತು. ಎಲ್ಲ ಪಾಸಿಟಿವ್ ಪ್ರಕರಣ ಸ್ವಾಬ್ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗೆ ಲ್ಯಾಬ್ ಗೆ ಕಳುಹಿಸಲಾಗುತ್ತಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT