ವಕೀಲರ ಪ್ರತಿಭಟನೆ 
ರಾಜ್ಯ

ಬೆಳಗಾವಿ: ಸುವರ್ಣ ಸೌಧ ಎದುರು ವಕೀಲರ ಪ್ರತಿಭಟನೆ: ನಾಲ್ಕು ಗಂಟೆ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ವಕೀಲರ ಸಂರಕ್ಷಣಾ ಕಾಯ್ದೆ ರೂಪಿಸಿ, ಜಾರಿಗೊಳಿಸಲು ಆಗ್ರಹಪಡಿಸಿ ಅಪಾರ ಸಂಖ್ಯೆಯ ವಕೀಲರು ಮಂಗಳವಾರ ಸುವರ್ಣ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಬೆಳಗಾವಿ: ವಕೀಲರ ಸಂರಕ್ಷಣಾ ಕಾಯ್ದೆ ರೂಪಿಸಿ, ಜಾರಿಗೊಳಿಸಲು ಆಗ್ರಹಪಡಿಸಿ ಅಪಾರ ಸಂಖ್ಯೆಯ ವಕೀಲರು ಮಂಗಳವಾರ ಸುವರ್ಣ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತ ವಕೀಲರು ಕೆಲ ಗಂಟೆಗಳ ಕಾಲ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದರು. ಅಲ್ಲದೇ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. 

ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಮಧ್ಯಾಹ್ನ 2.30ರ ನಂತರ ಕಿಲೋ ಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದವು. ಪೊಲೀಸರು ತಡೆಯಲೂ ಯತ್ನಿಸುತ್ತಿದ್ದರೂ ಧರಣಿ ನಿರತ ವಕೀಲರ ಅನೇಕ ಗುಂಪುಗಳು ಬ್ಯಾರಿಕೇಡ್ ತೆಗೆದು ಸೌಧಕ್ಕೆ ಘೇರಾವ್ ಹಾಕಲು ಯತ್ನಿಸಿದರು. ಬೆಳಗಾವಿ ಪೊಲೀಸ್ ಆಯುಕ್ತರು ಸೇರಿದಂತೆ ಹಲವು ಮಂದಿ ಆಕ್ರೋಶಗೊಂಡ ವಕೀಲರನ್ನು ಸಮಾಧಾನ ಪಡಿಸಲು ಯತ್ನಿಸಿದಾಗ ಮಾತಿನ ಚಕಮಕಿ ನಡೆಯಿತು. ಕೆಲ ವಕೀಲರು ಗೇಟ್ ಹತ್ತಿ ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಘೋಷಣೆ ಕೂಗಿದಾಗ ಸುವರ್ಣ ಸೌಧದ ಪ್ರವೇಶ ದ್ವಾರದ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.

   ಬಳಿಕ ಮಾಧುಸ್ವಾಮಿಪ್ರತಿಭಟನಾಕಾರರನ್ನು ಭೇಟಿಯಾಗಿ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಧರಣಿ ಹಿಂಪಡೆಯುವಂತೆ ಮನವಿ ಮಾಡಿದರು. ಆದರೂ ಪಟ್ಟು ಬಿಡದ ವಕೀಲರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದರು. ನಂತರ ಕಂದಾಯ ಸಚಿವ ಆರ್.ಅಶೋಕ್ ಪ್ರತಿಭಟನಾಕಾರರನ್ನು ಭೇಟಿ ಮಾಡಿ, ಮನವೊಲಿಸಿದರು.

ವಕೀಲರ ಹಿತದೃಷ್ಟಿಯಿಂದ ವಕೀಲರ ರಕ್ಷಣಾ ಮಸೂದೆಯನ್ನು ಅಂಗೀಕರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದು, ತಮ್ಮ ಪ್ರತಿಭಟನೆಯನ್ನು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ ಎಂದು ಅಶೋಕ್ ಹೇಳಿದರು. ಕೆಲವು ಗಂಟೆಗಳ ನಂತರ ವಕೀಲರು ಅಂತಿಮವಾಗಿ ಪ್ರತಿಭಟನೆ  ಹಿಂಪಡೆಯಲು ನಿರ್ಧರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT