ವಕೀಲರ ಪ್ರತಿಭಟನೆ 
ರಾಜ್ಯ

ಬೆಳಗಾವಿ: ಸುವರ್ಣ ಸೌಧ ಎದುರು ವಕೀಲರ ಪ್ರತಿಭಟನೆ: ನಾಲ್ಕು ಗಂಟೆ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ವಕೀಲರ ಸಂರಕ್ಷಣಾ ಕಾಯ್ದೆ ರೂಪಿಸಿ, ಜಾರಿಗೊಳಿಸಲು ಆಗ್ರಹಪಡಿಸಿ ಅಪಾರ ಸಂಖ್ಯೆಯ ವಕೀಲರು ಮಂಗಳವಾರ ಸುವರ್ಣ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಬೆಳಗಾವಿ: ವಕೀಲರ ಸಂರಕ್ಷಣಾ ಕಾಯ್ದೆ ರೂಪಿಸಿ, ಜಾರಿಗೊಳಿಸಲು ಆಗ್ರಹಪಡಿಸಿ ಅಪಾರ ಸಂಖ್ಯೆಯ ವಕೀಲರು ಮಂಗಳವಾರ ಸುವರ್ಣ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತ ವಕೀಲರು ಕೆಲ ಗಂಟೆಗಳ ಕಾಲ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿದರು. ಅಲ್ಲದೇ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. 

ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಮಧ್ಯಾಹ್ನ 2.30ರ ನಂತರ ಕಿಲೋ ಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದವು. ಪೊಲೀಸರು ತಡೆಯಲೂ ಯತ್ನಿಸುತ್ತಿದ್ದರೂ ಧರಣಿ ನಿರತ ವಕೀಲರ ಅನೇಕ ಗುಂಪುಗಳು ಬ್ಯಾರಿಕೇಡ್ ತೆಗೆದು ಸೌಧಕ್ಕೆ ಘೇರಾವ್ ಹಾಕಲು ಯತ್ನಿಸಿದರು. ಬೆಳಗಾವಿ ಪೊಲೀಸ್ ಆಯುಕ್ತರು ಸೇರಿದಂತೆ ಹಲವು ಮಂದಿ ಆಕ್ರೋಶಗೊಂಡ ವಕೀಲರನ್ನು ಸಮಾಧಾನ ಪಡಿಸಲು ಯತ್ನಿಸಿದಾಗ ಮಾತಿನ ಚಕಮಕಿ ನಡೆಯಿತು. ಕೆಲ ವಕೀಲರು ಗೇಟ್ ಹತ್ತಿ ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಘೋಷಣೆ ಕೂಗಿದಾಗ ಸುವರ್ಣ ಸೌಧದ ಪ್ರವೇಶ ದ್ವಾರದ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.

   ಬಳಿಕ ಮಾಧುಸ್ವಾಮಿಪ್ರತಿಭಟನಾಕಾರರನ್ನು ಭೇಟಿಯಾಗಿ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಧರಣಿ ಹಿಂಪಡೆಯುವಂತೆ ಮನವಿ ಮಾಡಿದರು. ಆದರೂ ಪಟ್ಟು ಬಿಡದ ವಕೀಲರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದರು. ನಂತರ ಕಂದಾಯ ಸಚಿವ ಆರ್.ಅಶೋಕ್ ಪ್ರತಿಭಟನಾಕಾರರನ್ನು ಭೇಟಿ ಮಾಡಿ, ಮನವೊಲಿಸಿದರು.

ವಕೀಲರ ಹಿತದೃಷ್ಟಿಯಿಂದ ವಕೀಲರ ರಕ್ಷಣಾ ಮಸೂದೆಯನ್ನು ಅಂಗೀಕರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದು, ತಮ್ಮ ಪ್ರತಿಭಟನೆಯನ್ನು ಹಿಂಪಡೆಯುವಂತೆ ಮನವಿ ಮಾಡಿದ್ದಾರೆ ಎಂದು ಅಶೋಕ್ ಹೇಳಿದರು. ಕೆಲವು ಗಂಟೆಗಳ ನಂತರ ವಕೀಲರು ಅಂತಿಮವಾಗಿ ಪ್ರತಿಭಟನೆ  ಹಿಂಪಡೆಯಲು ನಿರ್ಧರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!