ಆರ್ ಅಶೋಕ್ ಮತ್ತು ಸಚಿವ ಸುಧಾಕರ್ 
ರಾಜ್ಯ

ಕೋವಿಡ್-19: BF.7 ರೂಪಾಂತರಿ ವೈರಸ್ ತಳಿ ಸೋಂಕಿತರಿಗೆ ಉಚಿತ ಚಿಕಿತ್ಸೆ: ರಾಜ್ಯ ಸರ್ಕಾರ ಘೋಷಣೆ

ದೇಶಾದ್ಯಂತ ಮತ್ತೊಂದು ಕೋವಿಡ್ ಅಲೆಯ ಭೀತಿ ಸೃಷ್ಟಿಸಿರುವ ಒಮಿಕ್ರಾನ್ ಬಿಎಫ್.7 ರೂಪಾಂತರಿ ತಳಿ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.

ಬೆಂಗಳೂರು: ದೇಶಾದ್ಯಂತ ಮತ್ತೊಂದು ಕೋವಿಡ್ ಅಲೆಯ ಭೀತಿ ಸೃಷ್ಟಿಸಿರುವ ಒಮಿಕ್ರಾನ್ ಬಿಎಫ್.7 ರೂಪಾಂತರಿ ತಳಿ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.

ಪ್ರಸ್ತುತ ದೇಶದಲ್ಲಿ ಕೋವಿಡ್‌ನ ಹೊಸ ತಳಿ ಬಿಎಫ್‌ 7 ಕಾಣಿಸಿಕೊಂಡಿದ್ದು, ಈ ಹೊಸ ತಳಿ ಕರ್ನಾಟಕ ರಾಜ್ಯದಲ್ಲೂ ಕೂಡಾ ಕಾಣಿಸಿಕೊಂಡಿದೆ. ಹೀಗಾಗಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಹೊರಡಿಸಿದ್ದು, ಈ ನಡುವೆ ಈಗ ಬಿಎಫ್‌ 7 ಸೋಂಕಿತರಿಗೆ ಉಚಿತ ಚಿಕಿತ್ಸೆಯನ್ನು ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರವು ಸೋಮವಾರ ಘೋಷಿಸಿದೆ.

ಈ ಕುರಿತು ನಡೆದ ತಜ್ಞರ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಂದಾಯ ಸಚಿವ ಆರ್‌ ಅಶೋಕ್ ಅವರು, 'ನಾವು ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಎಲ್ಲ ಶಂಕಿತ ಪ್ರಕರಣ ಹೊಂದಿರುವವರನ್ನು ಐಸೋಲೇಟ್ ಮಾಡುತ್ತೇವೆ. ಚಿಕಿತ್ಸೆ ಕೂಡಾ ಇಲ್ಲಿ ನೀಡಲಾಗುತ್ತದೆ. ಹಾಗೆಯೇ ಕೋವಿಡ್‌ನ ಹೊಸ ತಳಿ BF.7 ಸೋಂಕಿತರಿಗೆ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ ಎಂದು  ತಿಳಿಸಿದ್ದಾರೆ.

ಅಂತೆಯೇ ಎಲ್ಲ ಜಿಲ್ಲೆಗಳಲ್ಲಿ ಸಮಿತಿಯನ್ನು ರಚನೆ ಮಾಡಲಾಗಿದ್ದು, ಈ ಸಮಿತಿಯು ಎಲ್ಲ ಆಸ್ಪತ್ರೆ ಹಾಗೂ ಕೋವಿಡ್ ಕೇಂದ್ರ ಮೊದಲಾದವುಗಳಿಗೆ ಭೇಟಿ ನೀಡಲಿದೆ. ಆಸ್ಪತ್ರೆಯಲ್ಲಿ ಹೇಗೆ ಸಿದ್ಧತೆ ನಡೆಸಲಾಗಿದೆ, ಆಕ್ಸಿಜನ್ ಪ್ಲಾಂಟ್ ವ್ಯವಸ್ಥೆ ಹೇಗಿದೆ, ಐಸಿಯು ವೆಂಟಿಲೇಟರ್ ಎಷ್ಟಿದೆ, ಸ್ಥಿತಿ ಹೇಗಿದೆ ಎಂದು ಪರಿಶೀಲಿಸಲಿದೆ ಎಂದು ಕೂಡಾ ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT