ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 
ರಾಜ್ಯ

ಬಿಬಿಎಂಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ ಚೀನಾದಿಂದ ಬಂದ ಪ್ರಯಾಣಿಕ, ಬೆಂಗಳೂರಿನಲ್ಲಿ ಪಾಲಿಕೆ ಹೈ ಅಲರ್ಟ್

ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೋವಿಡ್ ಪಾಸಿಟಿವ್ ಎಂದು ವರದಿಯಾಗಿದ್ದು, ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳನ್ನು ದಿಗ್ಭ್ರಮೆಗೊಳಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಪ್ರಯಾಣಿಕ ನಂತರ ಆಗ್ರಾಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೋವಿಡ್ ಪಾಸಿಟಿವ್ ಎಂದು ವರದಿಯಾಗಿದ್ದು, ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳನ್ನು ದಿಗ್ಭ್ರಮೆಗೊಳಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಪ್ರಯಾಣಿಕ ನಂತರ ಆಗ್ರಾಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಕೋವಿಡ್-19 ಪಾಸಿಟಿವ್ ಆದ ಪ್ರಯಾಣಿಕರ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದರು. ದಿನ ಕಳೆದಂತೆ, ಬಿಬಿಎಂಪಿ ಮತ್ತು ರಾಜ್ಯ ಆರೋಗ್ಯ ಇಲಾಖೆ ಹೆಚ್ಚಿನ ವಿವರಗಳನ್ನು ಖಚಿತಪಡಿಸಿಕೊಳ್ಳಲು ದಿನವಿಡೀ ಸರಣಿ ಸಭೆಗಳನ್ನು ನಡೆಸಿತು.

ಆಗ್ರಾದಲ್ಲಿ ಕೋವಿಡ್ ಪಾಸಿಟಿವ್ ಆಗಿರುವ ವ್ಯಕ್ತಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಪ್ರಯಾಣಿಕನ ಬಗ್ಗೆ ಹೆಚ್ಚಿನ ವಿವರಗಳನ್ನು ವಿಮಾನ ನಿಲ್ದಾಣ ಅಧಿಕಾರಿಗಳಿಂದ ಬಿಬಿಎಂಪಿ ಕೇಳಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ. ಕೆ.ವಿ. ತ್ರಿಲೋಕ್ ಚಂದ್ರ ತಿಳಿಸಿದ್ದಾರೆ.

ಈಮಧ್ಯೆ ಡಿಸೆಂಬರ್ 10ರಂದು, ಹಾಂಕಾಂಗ್‌ನಿಂದ ಹಿಂದಿರುಗಿದ ಬೆಂಗಳೂರಿಗರೊಬ್ಬರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಅವರ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗಾಗಿ ಕಳುಹಿಸಲಾಗಿದೆ ಮತ್ತು ವರದಿಗಳಿಗಾಗಿ ಕಾಯಲಾಗುತ್ತಿದೆ ಎಂದು ಹೇಳಿದರು.

ಪಾಲಿಕೆ ಹೈ ಅಲರ್ಟ್

ಆದಾಗ್ಯೂ, ಸೋಂಕಿತರ ಕುಟುಂಬ ಮತ್ತು ಇತರ ಪ್ರಾಥಮಿಕ ಮತ್ತು ಮಾಧ್ಯಮಿಕ ಸಂಪರ್ಕಗಳನ್ನು ಪತ್ತೆಹಚ್ಚಲಾಗಿದೆ ಮತ್ತು ಪರೀಕ್ಷಿಸಲಾಯಿತು. ಅವರೆಲ್ಲರ ವರದಿ ನೆಗೆಟಿವ್ ಆಗಿದೆ. ಜೀನೋಮ್ ಸೀಕ್ವೆನ್ಸಿಂಗ್ ವರದಿ ಬರುವವರೆಗೂ ಈ ಪ್ರದೇಶದಲ್ಲಿ ತೀವ್ರ ನಿಗಾ ಇರಿಸಲಾಗಿದೆ. ನಾಗರಿಕ ಇಲಾಖೆ ಕಟ್ಟೆಚ್ಚರ ವಹಿಸಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾದಿಂದ ಬಂದ ಪ್ರಯಾಣಿಕರೊಬ್ಬರು ಭಾರತಕ್ಕೆ ಬಂದು ಬೆಂಗಳೂರಿನಿಂದ ಆಗ್ರಾಕ್ಕೆ ಸಾಗಿರುವ ವರದಿಯನ್ನು ಮರುಪರಿಶೀಲಿಸಲಾಗಿದೆ. ಆದರೆ, ಅವರು ನೇರವಾಗಿ ಚೀನಾದಿಂದ ಬಂದಿದ್ದಾರೆ ಮತ್ತು ಕೋವಿಡ್ ವರದಿ ಪಾಸಿಟಿವ್ ಆಗಿದೆ ಎಂದು ಸ್ಪಷ್ಟಪಡಿಸುವ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT