ವಿಧಾನಪರಿಷತ್ 
ರಾಜ್ಯ

ಎಸ್ ಸಿ, ಎಸ್ ಟಿ ಮೀಸಲು ಹೆಚ್ಚಳ ವಿಧೇಯಕ: ಪರಿಷತ್ ಸರ್ವಾನುಮತದ ಒಪ್ಪಿಗೆ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ವಿಧೇಯಕ ವಿಧಾನಪರಿಷತ್ ನಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕಾರಗೊಂಡಿತು.

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ವಿಧೇಯಕ ವಿಧಾನಪರಿಷತ್ ನಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕಾರಗೊಂಡಿತು. ಮಸೂದೆ ಮಂಡಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ, ಪರಿಶಿಷ್ಟರ ಹಿತಾಸಕ್ತಿಗೆ ನಾವು ಬದ್ಧರಾಗಿದ್ದು, ಮುಂದೆ ಎದುರಾಗುವ ಯಾವುದೇ ಪರಿಣಾಮಗಳನ್ನು ಎದುರಿಸಲು ಸಿದ್ಧ ಎಂದರು. 

ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿ ಆಧಾರದ ಮೇಲೆ ಮೀಸಲಾತಿ ಹೆಚ್ಚಿಸಲಾಗಿದ್ದು, ಕೇಂದ್ರಕ್ಕೆ ಕಳುಹಿಸಲಾಗುವುದು, ಒಂದು ವೇಳೆ ಮೀಸಲಾತಿ ಹೆಚ್ಚಳ ಯಾವುದೇ ಹಂತದಲ್ಲಿ ತಿರಸ್ಕೃತಗೊಂಡರೆ ವಿಧಾನಮಂಡಲದ ಅಧಿವೇಶನವನ್ನು ಕರೆದು ಉಭಯ ಸದನಗಳಲ್ಲಿ ಮತ್ತೊಮ್ಮೆ ನಿರ್ಣಯ ಕೈಗೊಳ್ಳಲಾಗುವುದು ಎಂದರು.

103ನೇ ತಿದ್ದುಪಡಿಯು ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗದ ವರದಿ ಸೀಮಿತವಾಗಿ ಮೀಸಲಾತಿ ಹೆಚ್ಚಿಸಲಾಗಿದೆ. ಯಾವುದೇ ತೊಡಕುಗಳು ಎದುರಾಗದಂತೆ ನಿರಂತರವಾಗಿ ಸರ್ಕಾರ ಹೋರಾಟ ಮಾಡಲಿದೆ ಮತ್ತು ಪರಿಹಾರ ಕಂಡುಕೊಳ್ಳಲು ಪ್ರಯತ್ನಗಳನ್ನು ಮಾಡುತ್ತೇವೆ ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು.

 ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಆತುರದಿಂದ ನಿರ್ಧಾರ ಕೈಗೊಳ್ಳಲಾಗಿದೆ. ರಾಜಕೀಯವಾಗಿ ಪರಿಶಿಷ್ಟರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಟೀಕಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್‌: ಕಂದಾಯ ಸಚಿವ ಕೃಷ್ಣಬೈರೇಗೌಡ

ಪಲಾಯನವಾದಿಯಲ್ಲ, ನಾನು ರಾಮನಗರಕ್ಕೆ ಫಿಕ್ಸ್: ಎಲ್ಲಾ ಕಡೆಯಿಂದಲೂ ವಿರೋಧಿಗಳು ನನ್ನ ರೌಂಡಪ್ ಮಾಡ್ತಾರೆ; ನಿಖಿಲ್

ಮೊಬೈಲ್ ಪಾಸ್‌ವರ್ಡ್ ನಿನ್ನ ಹೆಂಡ್ತಿಗೆ ಕೊಡ್ತೀಯಾ? ಖಬರಸ್ಥಾನ ಆಸ್ತಿ ಬೇರೆಯವರಿಗೆ ವರ್ಗಾವಣೆಯಾಗಿದ್ದು ಹೇಗೆ; ಸಂಸದ ನಾಸೀರ್ ಹುಸೇನ್

SCROLL FOR NEXT