ವಿಧಾನಪರಿಷತ್ 
ರಾಜ್ಯ

ಎಸ್ ಸಿ, ಎಸ್ ಟಿ ಮೀಸಲು ಹೆಚ್ಚಳ ವಿಧೇಯಕ: ಪರಿಷತ್ ಸರ್ವಾನುಮತದ ಒಪ್ಪಿಗೆ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ವಿಧೇಯಕ ವಿಧಾನಪರಿಷತ್ ನಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕಾರಗೊಂಡಿತು.

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ವಿಧೇಯಕ ವಿಧಾನಪರಿಷತ್ ನಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕಾರಗೊಂಡಿತು. ಮಸೂದೆ ಮಂಡಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ, ಪರಿಶಿಷ್ಟರ ಹಿತಾಸಕ್ತಿಗೆ ನಾವು ಬದ್ಧರಾಗಿದ್ದು, ಮುಂದೆ ಎದುರಾಗುವ ಯಾವುದೇ ಪರಿಣಾಮಗಳನ್ನು ಎದುರಿಸಲು ಸಿದ್ಧ ಎಂದರು. 

ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿ ಆಧಾರದ ಮೇಲೆ ಮೀಸಲಾತಿ ಹೆಚ್ಚಿಸಲಾಗಿದ್ದು, ಕೇಂದ್ರಕ್ಕೆ ಕಳುಹಿಸಲಾಗುವುದು, ಒಂದು ವೇಳೆ ಮೀಸಲಾತಿ ಹೆಚ್ಚಳ ಯಾವುದೇ ಹಂತದಲ್ಲಿ ತಿರಸ್ಕೃತಗೊಂಡರೆ ವಿಧಾನಮಂಡಲದ ಅಧಿವೇಶನವನ್ನು ಕರೆದು ಉಭಯ ಸದನಗಳಲ್ಲಿ ಮತ್ತೊಮ್ಮೆ ನಿರ್ಣಯ ಕೈಗೊಳ್ಳಲಾಗುವುದು ಎಂದರು.

103ನೇ ತಿದ್ದುಪಡಿಯು ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗದ ವರದಿ ಸೀಮಿತವಾಗಿ ಮೀಸಲಾತಿ ಹೆಚ್ಚಿಸಲಾಗಿದೆ. ಯಾವುದೇ ತೊಡಕುಗಳು ಎದುರಾಗದಂತೆ ನಿರಂತರವಾಗಿ ಸರ್ಕಾರ ಹೋರಾಟ ಮಾಡಲಿದೆ ಮತ್ತು ಪರಿಹಾರ ಕಂಡುಕೊಳ್ಳಲು ಪ್ರಯತ್ನಗಳನ್ನು ಮಾಡುತ್ತೇವೆ ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು.

 ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಆತುರದಿಂದ ನಿರ್ಧಾರ ಕೈಗೊಳ್ಳಲಾಗಿದೆ. ರಾಜಕೀಯವಾಗಿ ಪರಿಶಿಷ್ಟರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಟೀಕಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT