ವಿಧಾನಪರಿಷತ್ 
ರಾಜ್ಯ

ಎಸ್ ಸಿ, ಎಸ್ ಟಿ ಮೀಸಲು ಹೆಚ್ಚಳ ವಿಧೇಯಕ: ಪರಿಷತ್ ಸರ್ವಾನುಮತದ ಒಪ್ಪಿಗೆ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ವಿಧೇಯಕ ವಿಧಾನಪರಿಷತ್ ನಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕಾರಗೊಂಡಿತು.

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ವಿಧೇಯಕ ವಿಧಾನಪರಿಷತ್ ನಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕಾರಗೊಂಡಿತು. ಮಸೂದೆ ಮಂಡಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ, ಪರಿಶಿಷ್ಟರ ಹಿತಾಸಕ್ತಿಗೆ ನಾವು ಬದ್ಧರಾಗಿದ್ದು, ಮುಂದೆ ಎದುರಾಗುವ ಯಾವುದೇ ಪರಿಣಾಮಗಳನ್ನು ಎದುರಿಸಲು ಸಿದ್ಧ ಎಂದರು. 

ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿ ಆಧಾರದ ಮೇಲೆ ಮೀಸಲಾತಿ ಹೆಚ್ಚಿಸಲಾಗಿದ್ದು, ಕೇಂದ್ರಕ್ಕೆ ಕಳುಹಿಸಲಾಗುವುದು, ಒಂದು ವೇಳೆ ಮೀಸಲಾತಿ ಹೆಚ್ಚಳ ಯಾವುದೇ ಹಂತದಲ್ಲಿ ತಿರಸ್ಕೃತಗೊಂಡರೆ ವಿಧಾನಮಂಡಲದ ಅಧಿವೇಶನವನ್ನು ಕರೆದು ಉಭಯ ಸದನಗಳಲ್ಲಿ ಮತ್ತೊಮ್ಮೆ ನಿರ್ಣಯ ಕೈಗೊಳ್ಳಲಾಗುವುದು ಎಂದರು.

103ನೇ ತಿದ್ದುಪಡಿಯು ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗದ ವರದಿ ಸೀಮಿತವಾಗಿ ಮೀಸಲಾತಿ ಹೆಚ್ಚಿಸಲಾಗಿದೆ. ಯಾವುದೇ ತೊಡಕುಗಳು ಎದುರಾಗದಂತೆ ನಿರಂತರವಾಗಿ ಸರ್ಕಾರ ಹೋರಾಟ ಮಾಡಲಿದೆ ಮತ್ತು ಪರಿಹಾರ ಕಂಡುಕೊಳ್ಳಲು ಪ್ರಯತ್ನಗಳನ್ನು ಮಾಡುತ್ತೇವೆ ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು.

 ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಆತುರದಿಂದ ನಿರ್ಧಾರ ಕೈಗೊಳ್ಳಲಾಗಿದೆ. ರಾಜಕೀಯವಾಗಿ ಪರಿಶಿಷ್ಟರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಟೀಕಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT