ಬಿಬಿಎಂಪಿ ಕಚೇರಿ 
ರಾಜ್ಯ

ವೋಟರ್ ಐಡಿ ಪರಿಷ್ಕರಣೆ ಹಗರಣ: ಚಿಲುಮೆ ಸಂಸ್ಥೆ ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಕಳವು ಮಾಡಿರುವ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಕಳವು ಮಾಡಿರುವ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಮತದಾನದ ಬಗ್ಗೆ ಜಾಗೃತಿಗಾಗಿ ಬಿಬಿಎಂಪಿ ನೀಡಿದ್ದ ಒಪ್ಪಿಗೆ ದುರುಪಯೋಗ ಪಡಿಸಿಕೊಂಡ ಹಿನ್ನೆಲೆಯಲ್ಲಿ ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಸದ್ಯ ರಾಜ್ಯ ಚುನಾವಣಾ ಆಯೋಗ ಚಿಲುಮೆ ಸಂಸ್ಥೆಯ ವಿರುದ್ದ ತನಿಖೆ ನಡೆಸುತ್ತಿದೆ. ಚಿಲುಮೆ ಸಂಸ್ಥೆ ಕಪ್ಪು ಪಟ್ಟಿಗೆ ಸೇರಿದ್ದರಿಂದ ಮುಂದಿನ ದಿನಗಳಲ್ಲಿ ಯಾವುದೆ ಕಾರ್ಯಕ್ರಮ ಹಾಗೂ ಟೆಂಡರ್​ಗಳನ್ನು ಸಂಸ್ಥೆಗೆ ನೀಡದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ

ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿರುದ್ಧ ಹಲಸೂರುಗೇಟ್‌ ಮತ್ತು ಕಾಡುಗೋಡಿ ಪೊಲೀಸ್‌ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಮತದಾರರ ಪಟ್ಟಿವಿಶೇಷ ಪರಿಷ್ಕರಣೆ 2023 ಕಾರ್ಯಚಟುವಟಿಕೆಗಳ ಕುರಿತು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಶೈಕ್ಷಣಿಕ ಸಾಂಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಷರತ್ತುಬದ್ಧ ಅನುಮತಿಯನ್ನು ಬಿಬಿಎಂಪಿ ನೀಡಿತ್ತು.

28 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಜೋಡಣೆಯನ್ನು ವಿಎಚ್‌ಎ(ವೋಟರ್ ಹೆಲ್ಪ್‌ಲೈನ್ ಆ್ಯಪ್‌) ಮೂಲಕ ಮಾಡಲು ಮತ್ತು ಮತದಾರರಲ್ಲಿ ಅರಿವು ಮೂಡಿಸಲು ಅನುಮತಿ ನೀಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?