ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣ, ಪೊಲೀಸರಿಂದ ನಾಲ್ವರ ಬಂಧನ

ಕನಕಪುರದಲ್ಲಿ ನಡೆದ ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕನಕಪುರದಲ್ಲಿ ನಡೆದ ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.

ಮೂರ್ತಿ ಆರ್ (31) ಎಂಬುವರನ್ನು ಡಿಸೆಂಬರ್ 22 ರ ಸಂಜೆ ಕೊಲೆ ಮಾಡಲಾಗಿತ್ತು. ಅವರು ರೈತ ಮತ್ತು ಆರ್‌ಟಿಐ ಕಾರ್ಯಕರ್ತರಾಗಿದ್ದರು. ಮೂರ್ತಿ ಅವರ ಚಿಕ್ಕಪ್ಪ ಶ್ರೀನಿವಾಸ್, ಅವರ ಮಕ್ಕಳಾದ ಚೇತನ್ ಮತ್ತು ಚಂದನ್  ಹಾಗೂ ಅವರ ಪತ್ನಿಯನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಮತ್ತು ಮೃತ ಮೂರ್ತಿ ಕುಟುಂಬಗಳ ನಡುವೆ ತಮ್ಮ ಕೃಷಿ ಜಮೀನು ಪ್ರವೇಶಿಸುವ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು. ಅವರು ಈ ಹಿಂದೆಯೂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಮಾತುಕತೆ ಮೂಲಕ ನೀವುಗಳೇ ವಿವಾದವನ್ನು ಬಗೆಹರಿಸಿಕೊಳ್ಳುವಂತೆ ಪೊಲೀಸರು ಸೂಚಿಸಿ ವಾಪಸ್ ಕಳುಹಿಸಿದ್ದರು.  ಜಗಳ ಮುಂದುವರೆಸಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿ ಕಳುಹಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.

ಡಿಸೆಂಬರ್ 22 ರಂದು ಮೂರ್ತಿ ಅವರ ಜಮೀನಿನ ಮೇಲೆ ಆರೋಪಿಗಳು  ಟ್ರ್ಯಾಕ್ಟರ್ ಓಡಿಸಿ ಬೆಳೆ ನಾಶಪಡಿಸಿದ್ದರು, ಈ ವಿಚಾರವಾಗಿ ಜಗಳ ನಡೆದಿದ್ದು, ಆರೋಪಿಗಳು  ಮೂರ್ತಿಗೆ ಬೆದರಿಕೆ ಹಾಕಿದ್ದರು.ಇದಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳು ಮೂರ್ತಿ ಅವರ ಮೇಲೆ ಹಲ್ಲೆ ನಡೆಸಿ ಬಂಡೆಗೆ ತಲೆ ಒಡೆದು ಹತ್ಯೆ ಮಾಡಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯ ಗೋಪಾಲ್ ಸೇರಿದಂತೆ ಇತರ ಆರು ಮಂದಿ ವಿರುದ್ಧ ಮೂರ್ತಿ  ತಾಯಿ ದೂರು ದಾಖಲಿಸಿದ್ದಾರೆ,  ಕೊಲೆಯ ಹಿಂದೆ ರಾಜಕೀಯ  ದುರುದ್ದೇಶವಿದೆ  ಎಂದು ಆರೋಪಿಸಿದ್ದಾರೆ. ಗೋಪಾಲ್ ಮತ್ತು ಇತರರನ್ನು ಬಂಧಿಸಲು ಬಲೆ ಬೀಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT