ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣ, ಪೊಲೀಸರಿಂದ ನಾಲ್ವರ ಬಂಧನ

ಕನಕಪುರದಲ್ಲಿ ನಡೆದ ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕನಕಪುರದಲ್ಲಿ ನಡೆದ ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರನ್ನು ಸಾತನೂರು ಪೊಲೀಸರು ಬಂಧಿಸಿದ್ದಾರೆ.

ಮೂರ್ತಿ ಆರ್ (31) ಎಂಬುವರನ್ನು ಡಿಸೆಂಬರ್ 22 ರ ಸಂಜೆ ಕೊಲೆ ಮಾಡಲಾಗಿತ್ತು. ಅವರು ರೈತ ಮತ್ತು ಆರ್‌ಟಿಐ ಕಾರ್ಯಕರ್ತರಾಗಿದ್ದರು. ಮೂರ್ತಿ ಅವರ ಚಿಕ್ಕಪ್ಪ ಶ್ರೀನಿವಾಸ್, ಅವರ ಮಕ್ಕಳಾದ ಚೇತನ್ ಮತ್ತು ಚಂದನ್  ಹಾಗೂ ಅವರ ಪತ್ನಿಯನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಮತ್ತು ಮೃತ ಮೂರ್ತಿ ಕುಟುಂಬಗಳ ನಡುವೆ ತಮ್ಮ ಕೃಷಿ ಜಮೀನು ಪ್ರವೇಶಿಸುವ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು. ಅವರು ಈ ಹಿಂದೆಯೂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಮಾತುಕತೆ ಮೂಲಕ ನೀವುಗಳೇ ವಿವಾದವನ್ನು ಬಗೆಹರಿಸಿಕೊಳ್ಳುವಂತೆ ಪೊಲೀಸರು ಸೂಚಿಸಿ ವಾಪಸ್ ಕಳುಹಿಸಿದ್ದರು.  ಜಗಳ ಮುಂದುವರೆಸಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿ ಕಳುಹಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.

ಡಿಸೆಂಬರ್ 22 ರಂದು ಮೂರ್ತಿ ಅವರ ಜಮೀನಿನ ಮೇಲೆ ಆರೋಪಿಗಳು  ಟ್ರ್ಯಾಕ್ಟರ್ ಓಡಿಸಿ ಬೆಳೆ ನಾಶಪಡಿಸಿದ್ದರು, ಈ ವಿಚಾರವಾಗಿ ಜಗಳ ನಡೆದಿದ್ದು, ಆರೋಪಿಗಳು  ಮೂರ್ತಿಗೆ ಬೆದರಿಕೆ ಹಾಕಿದ್ದರು.ಇದಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳು ಮೂರ್ತಿ ಅವರ ಮೇಲೆ ಹಲ್ಲೆ ನಡೆಸಿ ಬಂಡೆಗೆ ತಲೆ ಒಡೆದು ಹತ್ಯೆ ಮಾಡಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯ ಗೋಪಾಲ್ ಸೇರಿದಂತೆ ಇತರ ಆರು ಮಂದಿ ವಿರುದ್ಧ ಮೂರ್ತಿ  ತಾಯಿ ದೂರು ದಾಖಲಿಸಿದ್ದಾರೆ,  ಕೊಲೆಯ ಹಿಂದೆ ರಾಜಕೀಯ  ದುರುದ್ದೇಶವಿದೆ  ಎಂದು ಆರೋಪಿಸಿದ್ದಾರೆ. ಗೋಪಾಲ್ ಮತ್ತು ಇತರರನ್ನು ಬಂಧಿಸಲು ಬಲೆ ಬೀಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT