ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ ಮಿಕ್ಸರ್ ಗ್ರೈಂಡರ್ ಸ್ಫೋಟ ಪ್ರಕರಣ: ಪೊಲೀಸರಿಂದ ಓರ್ವನ ಬಂಧನ; ವಿಚ್ಛೇದಿತ ಮಹಿಳೆಯ ಹಿಂದೆ ಬಿದ್ದ ಪಾಗಲ್ ಪ್ರೇಮಿ ಕೃತ್ಯ?

ಹಾಸನದ ಕುವೆಂಪುನಗರ ಕೊರಿಯರ್ ಸೆಂಟರ್‌ನಲ್ಲಿ ಮಿಕ್ಸರ್ ಗ್ರೈಂಡರ್ ಸ್ಫೋಟಗೊಂಡು ಡಿಟಿಡಿಸಿ ಕೊರಿಯರ್ ಸೆಂಟರ್ ಮಾಲೀಕ ಶಶಿಕುಮಾರ್ ತೀವ್ರವಾಗಿ ಗಾಯಗೊಂಡ ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ಬಂದಿಸಿದ್ದಾರೆ

ಬೆಂಗಳೂರು: ಹಾಸನದ ಕುವೆಂಪುನಗರ ಕೊರಿಯರ್ ಸೆಂಟರ್‌ನಲ್ಲಿ ಮಿಕ್ಸರ್ ಗ್ರೈಂಡರ್ ಸ್ಫೋಟಗೊಂಡು ಡಿಟಿಡಿಸಿ ಕೊರಿಯರ್ ಸೆಂಟರ್ ಮಾಲೀಕ ಶಶಿಕುಮಾರ್ ತೀವ್ರವಾಗಿ ಗಾಯಗೊಂಡ ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ಬಂದಿಸಿದ್ದಾರೆ.

ಮಹಿಳೆಗೆ ಪಾರ್ಸೆಲ್ ಕಳುಹಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ, ಆದರೆ ಸೋಮವಾರ ಸಂಜೆ ಅದನ್ನು ತೆರೆದ ನಂತರ ಏಕೆ ಸ್ಫೋಟಿಸಿತು ಎಂಬ ಬಗ್ಗೆ ಪೊಲೀಸರಿಗೆ ಇನ್ನೂ ಸರಿಯಾದ ಮಾಹಿತಿ ಸಿಕ್ಕಿಲ್ಲ. ಪಾರ್ಸೆಲ್ ಕಳುಹಿಸಿದ್ದವರ ವಿಳಾಸವಿಲ್ಲದ ಕಾರಣ ಮಹಿಳೆ ಅದನ್ನು ಹಿಂತಿರುಗಿಸಿದ್ದಾರೆ.

ಕಳುಹಿಸಿದವರ ಹೆಸರು ಮತ್ತು ವಿಳಾಸವನ್ನು ಬಹಿರಂಗಪಡಿಸಲು ನಿರಾಕರಿಸಿದ ಎಸ್ಪಿ ಹರಿರಾಮ್ ಶಂಕರ್, ವಿಧಿ ವಿಜ್ಞಾನ ಪ್ರಯೋಗಾಲಯದಿಂದ ವರದಿ ಪಡೆದ ನಂತರ ವಿವರಗಳನ್ನು ಹಂಚಿಕೊಳ್ಳುವುದಾಗಿ ಹೇಳಿದರು. ಘಟನೆಯ ಹಿಂದೆ ವೈಯಕ್ತಿಕ ದ್ವೇಷ ಇರಬಹುದೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ವಿಧವೆಯಾಗಿರುವ ಮಹಿಳೆ ಒಂದೇ ವ್ಯಕ್ತಿಯಿಂದ ಮೂರು ಸಣ್ಣ ಪಾರ್ಸೆಲ್‌ಗಳು ಬಂದಿದ್ದವು, ಆದರೆ ಅವುಗಳನ್ನು ತೆರೆಯದೆ ಬಿಸಾಡಿದ್ದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT