ಸಿಎಂ ಬೊಮ್ಮಾಯಿ 
ರಾಜ್ಯ

ಭಯೋತ್ಪಾದನೆ ಬಗ್ಗೆ ಹಗುರವಾಗಿ ಮಾತನಾಡಬೇಡಿ: ಕಾಂಗ್ರೆಸ್'ಗೆ ಸಿಎಂ ಬೊಮ್ಮಾಯಿ

ಮತದಾರರ ಮಾಹಿತಿ ಕಳವು ಪ್ರಕರಣಕ್ಕೂ ಮಂಗಳೂರು ಸ್ಫೋಟ ಪ್ರಕರಣಕ್ಕೂ ಲಿಂಕ್ ಮಾಡಬೇಡಿ, ಭಯೋತ್ಪಾದನೆ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಕಾಂಗ್ರೆಸ್'ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಬೆಳಗಾವಿ: ಮತದಾರರ ಮಾಹಿತಿ ಕಳವು ಪ್ರಕರಣಕ್ಕೂ ಮಂಗಳೂರು ಸ್ಫೋಟ ಪ್ರಕರಣಕ್ಕೂ ಲಿಂಕ್ ಮಾಡಬೇಡಿ, ಭಯೋತ್ಪಾದನೆ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಕಾಂಗ್ರೆಸ್'ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಓಟ್ ಕದಿಯೋದು, ಸೇರಿಸೋದು, ಬೇಡದವರನ್ನು‌ ಲಿಸ್ಟ್ ನಿಂದ ತೆಗೆಯುವುದು ನಮ್ಮ ಪಕ್ಷದ ಸಂಸ್ಕೃತಿ ಅಲ್ಲ.‌ ಆದರೆ, ಕಾಂಗ್ರೆಸ್ ನವರು ಇದರಲ್ಲಿ ಬಹಳಷ್ಟು ಅನುಭವ ಪಡೆದುಕೊಂಡಿದ್ದಾರೆ. ಈ ಬಗ್ಗೆ ನಮಗೆ ಗೊತ್ತಿದೆ, ಯಾರು ಯಾವ ಕ್ಷೇತ್ರದಲ್ಲಿ ಸೇರಿಸುತ್ತಾರೆ ತೆಗೆಯುತ್ತಾರೆ ಎಂದು ಗೊತ್ತಿಲ್ಲ. ಬಿಎಲ್ ಎ ನೇಮಕಕ್ಕೆ ನಾವು ಅನುಮತಿ ಕೊಟ್ಟಿಲ್ಲ. ಈಗಾಗಲೇ ಆ ಸಂಸ್ಥೆಗೆ ಸೇರಿದವರನ್ನು ಬಂಧನ ಮಾಡಿದ್ದೇವೆ. ತನಿಖೆ ಆಗಲಿ ಎಲ್ಲವೂ ಹೊರಬರಲಿ ಎಂದು ಹೇಳಿದರು.

ಮತದಾರರ ವೈಯಕ್ತಿ ಮಾಹಿತಿ ಕಳವು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಶ್ನೆಯೇ ಇಲ್ಲ. ಭಯೋತ್ಪಾದನೆ ಮಟ್ಟಹಾಕುವಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಇದೇ ವೇಳೆ ತಿಳಿಸಿದರು.

ಮತದಾರರ ವೈಯಕ್ತಿ ಮಾಹಿತಿ ಕಳವು ಪ್ರಕರಣ ಸಂಬಂಧ ಪೊಲೀಸರು, ಚುನಾವಣಾ ಆಯೋಗವು ತನಿಖೆ ನಡೆಸುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಖಚಿತ. ಆದರೆ, ಭಯೋತ್ಪಾದನೆ ವಿಚಾರದಲ್ಲಿ ಹಗುರವಾಗಿ ಮಾತನಾಡಿದರೆ ಸಹಿಸುವುದಿಲ್ಲ. ಒಂದಕ್ಕೊಂದು ತಾಳೆ ಹಾಕುವುದು ಸರಿಯಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್ ವಿಜಯ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

450 ಕೋಟಿ ರೂ. ಮೌಲ್ಯದ ಧರ್ಮೇಂದ್ರ ಆಸ್ತಿ ಯಾರ ಪಾಲಾಗುತ್ತೆ? ಕುತೂಹಲ ಕೆರಳಿಸಿದ ಹೇಮಾ ಮಾಲಿನಿ ಪೋಸ್ಟ್!

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

SCROLL FOR NEXT