ಸಿಎಂ ಬೊಮ್ಮಾಯಿ 
ರಾಜ್ಯ

ಭಯೋತ್ಪಾದನೆ ಬಗ್ಗೆ ಹಗುರವಾಗಿ ಮಾತನಾಡಬೇಡಿ: ಕಾಂಗ್ರೆಸ್'ಗೆ ಸಿಎಂ ಬೊಮ್ಮಾಯಿ

ಮತದಾರರ ಮಾಹಿತಿ ಕಳವು ಪ್ರಕರಣಕ್ಕೂ ಮಂಗಳೂರು ಸ್ಫೋಟ ಪ್ರಕರಣಕ್ಕೂ ಲಿಂಕ್ ಮಾಡಬೇಡಿ, ಭಯೋತ್ಪಾದನೆ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಕಾಂಗ್ರೆಸ್'ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಬೆಳಗಾವಿ: ಮತದಾರರ ಮಾಹಿತಿ ಕಳವು ಪ್ರಕರಣಕ್ಕೂ ಮಂಗಳೂರು ಸ್ಫೋಟ ಪ್ರಕರಣಕ್ಕೂ ಲಿಂಕ್ ಮಾಡಬೇಡಿ, ಭಯೋತ್ಪಾದನೆ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಕಾಂಗ್ರೆಸ್'ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ.

ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಓಟ್ ಕದಿಯೋದು, ಸೇರಿಸೋದು, ಬೇಡದವರನ್ನು‌ ಲಿಸ್ಟ್ ನಿಂದ ತೆಗೆಯುವುದು ನಮ್ಮ ಪಕ್ಷದ ಸಂಸ್ಕೃತಿ ಅಲ್ಲ.‌ ಆದರೆ, ಕಾಂಗ್ರೆಸ್ ನವರು ಇದರಲ್ಲಿ ಬಹಳಷ್ಟು ಅನುಭವ ಪಡೆದುಕೊಂಡಿದ್ದಾರೆ. ಈ ಬಗ್ಗೆ ನಮಗೆ ಗೊತ್ತಿದೆ, ಯಾರು ಯಾವ ಕ್ಷೇತ್ರದಲ್ಲಿ ಸೇರಿಸುತ್ತಾರೆ ತೆಗೆಯುತ್ತಾರೆ ಎಂದು ಗೊತ್ತಿಲ್ಲ. ಬಿಎಲ್ ಎ ನೇಮಕಕ್ಕೆ ನಾವು ಅನುಮತಿ ಕೊಟ್ಟಿಲ್ಲ. ಈಗಾಗಲೇ ಆ ಸಂಸ್ಥೆಗೆ ಸೇರಿದವರನ್ನು ಬಂಧನ ಮಾಡಿದ್ದೇವೆ. ತನಿಖೆ ಆಗಲಿ ಎಲ್ಲವೂ ಹೊರಬರಲಿ ಎಂದು ಹೇಳಿದರು.

ಮತದಾರರ ವೈಯಕ್ತಿ ಮಾಹಿತಿ ಕಳವು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಶ್ನೆಯೇ ಇಲ್ಲ. ಭಯೋತ್ಪಾದನೆ ಮಟ್ಟಹಾಕುವಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಇದೇ ವೇಳೆ ತಿಳಿಸಿದರು.

ಮತದಾರರ ವೈಯಕ್ತಿ ಮಾಹಿತಿ ಕಳವು ಪ್ರಕರಣ ಸಂಬಂಧ ಪೊಲೀಸರು, ಚುನಾವಣಾ ಆಯೋಗವು ತನಿಖೆ ನಡೆಸುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಖಚಿತ. ಆದರೆ, ಭಯೋತ್ಪಾದನೆ ವಿಚಾರದಲ್ಲಿ ಹಗುರವಾಗಿ ಮಾತನಾಡಿದರೆ ಸಹಿಸುವುದಿಲ್ಲ. ಒಂದಕ್ಕೊಂದು ತಾಳೆ ಹಾಕುವುದು ಸರಿಯಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್