ನಟ ಚೇತನ್ ಅಹಿಂಸ 
ರಾಜ್ಯ

ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿಗಳ ಹೋರಾಟ ನ್ಯಾಯಸಮ್ಮತವಲ್ಲ, ಕಾಂಗ್ರೆಸ್-ಬಿಜೆಪಿಗೆ ಮಾತನಾಡುವ ನೈತಿಕ ಹಕ್ಕಿಲ್ಲ: ನಟ ಚೇತನ್

ಮೀಸಲಾತಿ ವಿಚಾರವಾಗಿ ನಟ ಚೇತನ್ ಅಹಿಂಸ ಮತ್ತೊಮ್ಮೆ ಮಾತನಾಡಿದ್ದಾರೆ. ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿಗಳ ಹೋರಾಟ ನ್ಯಾಯಸಮ್ಮತವಲ್ಲ, ಪ್ರವರ್ಗ 3ಬಿಯಿಂದ 2ಎಗೆ ಸೇರಿಸಿ ಎಂಬ ಬೇಡಿಕೆ ಸ್ವಾರ್ಥದ್ದಾಗಿದೆ ಎಂದಿದ್ದಾರೆ.

ಬೆಂಗಳೂರು: ಮೀಸಲಾತಿ ವಿಚಾರವಾಗಿ ನಟ ಚೇತನ್ ಅಹಿಂಸ ಮತ್ತೊಮ್ಮೆ ಮಾತನಾಡಿದ್ದಾರೆ. ಮೀಸಲಾತಿ ವಿಚಾರದಲ್ಲಿ(reservation) ಪಂಚಮಸಾಲಿಗಳ ಹೋರಾಟ ನ್ಯಾಯಸಮ್ಮತವಲ್ಲ, ಪ್ರವರ್ಗ 3ಬಿಯಿಂದ 2ಎಗೆ ಸೇರಿಸಿ ಎಂಬ ಬೇಡಿಕೆ ಸ್ವಾರ್ಥದ್ದಾಗಿದೆ ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ನಿನ್ನೆ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಕೊಡುಗೆ ಶೂನ್ಯ. ಪ್ರಧಾನಿ ನರೇಂದ್ರ ಮೋದಿ ಮೀಸಲಾತಿ ವಿಚಾರದಲ್ಲಿ ಜನಪರ ಕೆಲಸ ಮಾಡಿಲ್ಲ. 2019ರಲ್ಲಿ ಇಡಬ್ಲ್ಯುಎಸ್ ಕಾಯ್ದೆ ತರುವ ಮೂಲಕ ಮೀಸಲಾತಿ ಉದ್ದೇಶದ ದಿಕ್ಕನ್ನು ತಪ್ಪಿಸಿದರು ಎಂದಿದ್ದಾರೆ.

ಗಾಂಧಿ ಮತ್ತು ನೆಹರೂ ಮೀಸಲಾತಿ ತೆಗೆಯಬೇಕೆಂದು ಪ್ರಯತ್ನಿಸಿದ್ದರು.ನೆಹರೂ 1961ರಲ್ಲಿ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮೀಸಲಾತಿಯನ್ನು ತೆಗೆದುಹಾಕಬೇಕೆಂದು ಪತ್ರ ಬರೆದಿದ್ದರು ಎಂದು ಆಪಾದಿಸಿದರು.

ನಾಗಮೋಹನ್ ದಾಸ್ ವರದಿಯಂತೆ ಪರಿಶಿಷ್ಟ ಜಾತಿಗೆ ಶೇಕಡಾ 17 ಮತ್ತು ಪರಿಶಿಷ್ಟ ಪಂಗಡಕ್ಕೆ ಶೇಕಡಾ 7ರಷ್ಟು ಮೀಸಲಾತಿಯನ್ನು ಮುಖ್ಯಮಂತ್ರಿ ಬೊಮ್ಮಾಯಿಯವರು ಹೆಚ್ಚಿಸಿರುವುದು ಒಳ್ಳೆಯದು. ಇದನ್ನು ಕಾರ್ಯರೂಪಕ್ಕೆ ತರಬೇಕೆಂದರು. ಬಿಜೆಪಿಯನ್ನು ಮೀಸಲಾತಿ ವಿರೋಧಿ ಎಂದು ಹೇಳುವ ಸಿದ್ದರಾಮಯ್ಯನವರು ಏನು ಕೊಡುಗೆ ನೀಡಿದ್ದಾರೆ ಎಂದು ಕೂಡ ಪ್ರಶ್ನಿಸಿದರು.

ಒಕ್ಕಲಿಗರು ಮೀಸಲಾತಿ ಕೇಳುವುದರಲ್ಲಿ ನ್ಯಾಯವಿದೆ. ಶೇಕಡಾ 4ರಿಂದ ಶೇಕಡಾ 12ರಷ್ಟು ಮೀಸಲಾತಿಯನ್ನು ಹೆಚ್ಚಿಸಬೇಕು ಎಂ ಹೋರಾಟ ಒಪ್ಪಬಹುದು ಎಂದರು. ಯಾವುದೇ ಸಮುದಾಯದವರು ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೇಳಬೇಕು ಎಂದರು.

ಕಾಂಗ್ರೆಸ್-ಬಿಜೆಪಿಗಳ ಮೀಸಲಾತಿ ವಿಚಾರದಲ್ಲಿ ಕೊಡುಗೆ ಶೂನ್ಯ: ಈ ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಮತ್ತು ಬಿಜೆಪಿಯದ್ದು ಮೀಸಲಾತಿ ವಿಚಾರದಲ್ಲಿ ಕೊಡುಗೆ ಶೂನ್ಯವಾಗಿದೆ. ಬಿಜೆಪಿ ಇತ್ತೀಚೆಗೆ ಮೀಸಲಾತಿಯನ್ನು ತಿರುಚಿದೆ, ಕಾಂಗ್ರೆಸ್ ತೆಗೆದುಹಾಕುವ ಹುನ್ನಾರ ಮಾಡಿದೆ, ಎರಡೂ ಪಕ್ಷದವರಿಗೆ ಮೀಸಲಾತಿ ವಿಚಾರವಾಗಿ ಮಾತನಾಡುವ ನೈತಿಕ ಹಕ್ಕಿಲ್ಲ, ಈ ದೇಶದ ಬಹುಜನ ಸಮಾನತಾವಾದಿಗಳು, ಮೂಲಭೂತ ನಿವಾಸಿಗಳು ಮೀಸಲಾತಿ ತಂದಿದ್ದಾರೆ ಎಂದರು.

ಎಸ್ ಸಿ ಒಳಮೀಸಲಾತಿ ಹೋರಾಟ ನ್ಯಾಯಸಮ್ಮತ. ಜಸ್ಟೀಸ್ ಸದಾಶಿವ ಆಯೋಗ ವರದಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT