ಹಿರಿಯ ನಾಯಕ ಆರ್ ವಿ ದೇಶಪಾಂಡೆಯವರಿಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಇಂದು ಬೆಳಗಾವಿ ಅಧಿವೇಶನದಲ್ಲಿ ನೀಡಲಾಯಿತು. 
ರಾಜ್ಯ

ಬೆಳಗಾವಿ ಅಧಿವೇಶನ: ಕಾಂಗ್ರೆಸ್ ಹಿರಿಯ ನಾಯಕ ಆರ್ ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ (Winter Session in Belagavi) 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಾಂಗ್ರೆಸ್ ನ ಹಿರಿಯ ನಾಯಕ ಆರ್ ವಿ ದೇಶಪಾಂಡೆಯವರಿಗೆ ನೀಡಲಾಯಿತು.

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ (Winter Session in Belagavi) 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಾಂಗ್ರೆಸ್ ನ ಹಿರಿಯ ನಾಯಕ ಆರ್ ವಿ ದೇಶಪಾಂಡೆಯವರಿಗೆ ನೀಡಲಾಯಿತು.

ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆಗೆ (Raghunath Vishwanath Rao Deshpande) ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಕಳೆದ ವರ್ಷ ಶಿಕಾರಿಪುರ ಕ್ಷೇತ್ರದ ಶಾಸಕ ಬಿ ಎಸ್ ​ಯಡಿಯೂರಪ್ಪ ಅವರ ಪಾಲಾಗಿತ್ತು. ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಳೆದ ವರ್ಷದಿಂದ ನೀಡಲಾಗುತ್ತಿದೆ.

75 ವರ್ಷ ವಯಸ್ಸಿನ ಹಿರಿಯ ನಾಯಕ ದೇಶಪಾಂಡೆ ಅವರು ಇದುವರೆಗೆ 9 ಬಾರಿ ವಿಧಾನಸಭೆ ಚುನಾವಣೆ ಎದುರಿಸಿದ್ದಾರೆ. ದೇಶಪಾಂಡೆ ಅವರು ತಮ್ಮ ಹುಟ್ಟೂರಾದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಅಸೆಂಬ್ಲಿ ಕ್ಷೇತ್ರವನ್ನು ಕಾಂಗ್ರೆಸ್​ ವತಿಯಿಂದ ಪ್ರತಿನಿಧಿಸಿದ್ದಾರೆ.

1947 ಮಾರ್ಚ್​ 16ರಂದು ಜನಿಸಿದ ದೇಶಪಾಂಡೆ ಅವರು ಬಿಎ, ಎಲ್​ಎಲ್​ಬಿ ವ್ಯಾಸಂಗ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಸಾರ್ವಜನಿಕ ಸೇವೆಗೆ ಅಂಕಿತರಾದ ದೇಶಪಾಂಡೆ ಅವರು ಜನತಾಪರಿವಾರದೊಂದಿಗೆ ವಿಧಾನಸಭೆ ಪ್ರವೇಶಿಸಿದರು. ಎಸ್​ ಎಂ ಕೃಷ್ಣ ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಅತ್ಯಂತ ದೀರ್ಘಾವಧಿಗೆ 13 ವರ್ಷ ಕಾಲ ಕೈಗಾರಿಕಾ ಸಚಿವರಾಗಿದ್ದರು.

ಪೂರ್ವ ನಿಗದಿ ಪ್ರಕಾರ ನಾಡಿದ್ದು ಶುಕ್ರವಾರ ಬೆಳಗಾವಿ ಅಧಿವೇಶನ ಮುಗಿಯಬೇಕಾಗಿದೆ. ಆದರೆ ನಿಗದಿತ ಅವಧಿಗಿಂತ ಒಂದು ದಿನ ಮೊದಲೇ ನಾಳೆ ಗುರುವಾರವೇ ವಿಧಾನಮಂಡಲ ಅಧಿವೇಶನ ಅಂತ್ಯವಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT