ಆರೋಪಿ ಬಂಧನ (ಸಾಂದರ್ಭಿಕ ಚಿತ್ರ) 
ರಾಜ್ಯ

ಬೆಂಗಳೂರು; ಕ್ರೈಸ್ತ ಧರ್ಮಕ್ಕೆ ಮತಾಂತರ ಯತ್ನ ಆರೋಪ; ಆಂಧ್ರ ಪ್ರದೇಶದ ಮೂವರ ವಿರುದ್ಧ FIR

ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದ ಆರೋಪದ ಮೇರೆಗೆ ಆಂಧ್ರ ಪ್ರದೇಶ ಮೂಲದ ಮೂವರ ವಿರುದ್ಧ ಬೆಂಗಳೂರು ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದ ಆರೋಪದ ಮೇರೆಗೆ ಆಂಧ್ರ ಪ್ರದೇಶ ಮೂಲದ ಮೂವರ ವಿರುದ್ಧ ಬೆಂಗಳೂರು ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.

ಬೆಂಗಳೂರಿನ ಜೆ.ಜೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸಿದ ಆರೋಪ ಮೇರೆಗೆ ಆಂಧ್ರ ಪ್ರದೇಶ ಮೂಲದ ವಿಜಯ್​​, ಶೃತಿ, ನೆಲ್ಸನ್ ವಿರುದ್ಧ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಮೂಲಗಳ ಪ್ರಕಾರ ವಿ.ಎಸ್​. ಗಾರ್ಡನ್​ನಲ್ಲಿ ಹಿಂದೂಗಳಿಗೆ ತೆಲುಗು ಭಾಷೆಯಲ್ಲಿದ್ದ ಏಸುಕ್ರಿಸ್ತನ ಕರಪತ್ರ ಹಂಚಿ ಹಣದ ಆಮಿಷವೊಡ್ಡಿ ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡಿ ಮತಾಂತರ ಮಾಡಲು ಯತ್ನ ನಡೆದಿದೆ ಎಂದು ಆರೋಪಿಸಲಾಗಿದೆ. 

ಈ ಬಗ್ಗೆ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಮುಖಂಡರಾದ ಎಮ್​ಎಲ್ ಶಿವಕುಮಾರ್, ಪವನ್ ಮತ್ತು ಹರ್ಷ ಮುತಾಲಿಕ್ ಮುಂತದಾವರು ದೂರು ನೀಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT