ಸಾಂದರ್ಭಿಕ ಚಿತ್ರ 
ರಾಜ್ಯ

ಸರ್ಕಾರ ನಮ್ಮಿಂದ ದುಪ್ಪಟ್ಟು ಆದಾಯ ಪಡೆಯುತ್ತಿದೆ: ಕ್ವಾರಿ ಮಾಲೀಕರು

ಕರ್ನಾಟಕ ಕ್ವಾರಿ ಮತ್ತು ಕ್ರಷರ್ ಮಾಲೀಕರ ಸಂಘದ ಒಕ್ಕೂಟದ 14,320 ಸದಸ್ಯರು ಮತ್ತು ಪ್ರತಿನಿಧಿಗಳು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಕರ್ನಾಟಕ ಕ್ವಾರಿ ಮತ್ತು ಕ್ರಷರ್ ಮಾಲೀಕರ ಸಂಘದ ಒಕ್ಕೂಟದ 14,320 ಸದಸ್ಯರು ಮತ್ತು ಪ್ರತಿನಿಧಿಗಳು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.

ಸರ್ಕಾರ ನಮ್ಮಿಂದ ದುಪ್ಪಟ್ಟು ಆದಾಯ ಪಡೆಯುತ್ತಿದ್ದು, ನಮ್ಮಿಂದ ಹೆಚ್ಚುವರಿ ಹಣ ವಸೂಲಿ ಮಾಡಬಾರದು ಎಂದು ಆಗ್ರಹಿಸಿದರು.

ಸರ್ಕಾರಕ್ಕೆ ಸಂದಾಯವಾಗುವ ರಾಜಧಾನ ಈಗಾಗಲೇ ಸಂದಾಯವಾಗಿದೆ. ಆದ್ದರಿಂದ ಗಣಿ ಗುತ್ತಿಗೆದಾರರಿಂದ ವಸೂಲಿ ಮಾಡಬಾರದು. ಸರ್ಕಾರ ಕಳೆದ 40 ವರ್ಷಗಳಿಂದ ಇದನ್ನು ಮಾಡಿಕೊಂಡು ಬಂದಿದೆ. ಹೆಚ್ಚಿನ ಹಣವನ್ನು ಪಾವತಿಸಲು ದಂಡವನ್ನೇಕೆ ವಿಧಿಸಲಾಗುತ್ತಿದೆ ಎಂದು ಪ್ರಶ್ನಿಸಿದರು.

ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಜನವರಿ ಮೊದಲ ವಾರದಲ್ಲಿ ‘ಬೆಂಗಳೂರು ಚಲೋ’ ಮೆರವಣಿಗೆ ನಡೆಸುವುದಾಗಿ ಇದೇ ವೇಳೆ ಬೆದರಿಕೆ ಹಾಕಿದರು.

ಈ ವೇಳೆ ಗಣಿ ಸಚಿವ ಹಾಲಪ್ಪ ಆಚಾರ್ ಪ್ರತಿಭಟನಾ ನಿರತರನ್ನು ಭೇಟಿ ಮಾಡಿ, ಬೇಡಿಕೆಗಳನ್ನು ಸರಕಾರದ ಮುಂದೆ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು.

ಈ ವಿಚಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗಳ ಗಮನಕ್ಕೆ ತರಲಾಗಿದೆ. ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿರುವ ಕಾರಣ ಸರ್ಕಾರ ಅಧಿವೇಶನದಲ್ಲಿ ನಿರತವಾಗಿದೆ. ಹೀಗಾಗಿ ಬೇಡಿಕೆಗಳಿಗೆ ಸ್ಪಂದಿಸಲು ಒಂದು ವಾರ ಕಾಲಾವಕಾಶ ಬೇಕು ಎಂದು ಹೇಳಿದ್ದಾರೆ.

ಈ ನಡುವೆ ಪ್ರತಿಭಟನಾನಿರತರು ರಾಜ್ಯದ ಅಧಿಕಾರಿಗಳು ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ವಿಚಾರ ತರುವುದಾಗಿ ಎಚ್ಚರಿಸಿದ್ದಾರೆ.

ಕರ್ನಾಟಕ ಕ್ವಾರಿ ಮತ್ತು ಕ್ರಷರ್ ಮಾಲೀಕರ ಸಂಘದ ಒಕ್ಕೂಟ ಪ್ರತಿಭಟನೆಯಿಂದಾಗಿ ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಬಹುದು ಎಂದು ರಾಜ್ಯ ಸರ್ಕಾರದ ಮೂಲಗಳು ಆತಂಕ ವ್ಯಕ್ತಪಡಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT