ಸಂಗ್ರಹ ಚಿತ್ರ 
ರಾಜ್ಯ

ಇದೇ ಮೊದಲ ಬಾರಿಗೆ 'ಬ್ಲ್ಯೂ ಎಕಾನಮಿ ಅಧ್ಯಯನ'ದಲ್ಲಿ ತೊಡಗಿಕೊಂಡ ಐಐಎಸ್ಸಿ ಸಂಶೋಧಕರು!

ಇದೇ ಮೊದಲ ಬಾರಿಗೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಸಂಶೋಧಕರು ಕರ್ನಾಟಕದ ಜಲಮೂಲಗಳು ಮತ್ತು ಕರಾವಳಿಗಳ ಪರಿಸರ ಮತ್ತು ಆರ್ಥಿಕ ಮೌಲ್ಯವನ್ನು ಅಧ್ಯಯನ ಮಾಡಲು ಮುಂದಾಗಿದ್ದಾರೆ.

ಬೆಂಗಳೂರು: ಇದೇ ಮೊದಲ ಬಾರಿಗೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಸಂಶೋಧಕರು ಕರ್ನಾಟಕದ ಜಲಮೂಲಗಳು ಮತ್ತು ಕರಾವಳಿಗಳ ಪರಿಸರ ಮತ್ತು ಆರ್ಥಿಕ ಮೌಲ್ಯವನ್ನು ಅಧ್ಯಯನ ಮಾಡಲು ಮುಂದಾಗಿದ್ದಾರೆ.

ಬ್ಲ್ಯೂ ಎಕಾನಮಿ ಅಧ್ಯಯನ'ವು ಕೇಂದ್ರ ಸರ್ಕಾರ ಮತ್ತು ವಿಶ್ವಬ್ಯಾಂಕ್‌ನ ಜಂಟಿ ಉಪಕ್ರಮದ ಭಾಗವಾಗಿದೆ.

"ದೇಶದ ಪೂರ್ವ ಮತ್ತು ಪಶ್ಚಿಮ ಕರಾವಳಿಯಲ್ಲಿ ಇಂತಹ ಅಧ್ಯಯನವನ್ನು ಕೈಗೊಳ್ಳುತ್ತಿರುವುದು ಭಾರತದಲ್ಲಿ ಇದೇ ಮೊದಲ ಬಾರಿಯಾಗಿದೆ. ಅಧ್ಯಯನದ ಮಾನದಂಡಗಳನ್ನು ನಿರ್ಧರಿಸಲಾಗುತ್ತಿದೆ ಎಂದು ಐಐಎಸ್‌ಸಿಯ ಪರಿಸರ ವಿಜ್ಞಾನಗಳ ಕೇಂದ್ರದ ಪ್ರೊಫೆಸರ್ ಟಿ ವಿ ರಾಮಚಂದ್ರ ಅವರು ಹೇಳಿದ್ದಾರೆ.

ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು ಅಧ್ಯಯನವನ್ನು ಕೈಗೊಳ್ಳುತ್ತಿದೆ. ತಜ್ಞರು, ಪರಿಸರ ತಜ್ಞರು ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಅಧಿಕಾರಿಗಳು ಕೂಡ ಯೋಜನೆಯ ಭಾಗವಾಗಿರುತ್ತಾರೆ. ಈ ಉಪಕ್ರಮದ ಅಡಿಯಲ್ಲಿ ಮೊದಲ ಸಭೆಯು ನವೆಂಬರ್‌ನಲ್ಲಿ ಚೆನ್ನೈನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

ಸಾಗರಮಾಲಾ ಯೋಜನೆಯಡಿ ಕೇಂದ್ರ ಸರ್ಕಾರವು ಬಂದರುಗಳನ್ನು ರಚಿಸುವ ಕೆಲಸ ಮಾಡುತ್ತಿರುವುದರಿಂದ ಈ ಅಧ್ಯಯನವು ಮಹತ್ವದ್ದಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.

ಕರ್ನಾಟಕದಂತಹ ಅನೇಕ ರಾಜ್ಯಗಳು ನದಿಗಳನ್ನು ಪರಸ್ಪರ ಜೋಡಿಸುವ ಮತ್ತು ಸಾಗರಗಳು, ಋತುಗಳಿಗೆ ನೀರಿನ ಹರಿವನ್ನು ಕಡಿಮೆ ಮಾಡುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಹೆಚ್ಚುತ್ತಿರುವ ಅಣೆಕಟ್ಟುಗಳ ಸಂಖ್ಯೆಯು ಸಮುದ್ರಕ್ಕೆ ಕಾರಣವಾಗುವ ನೀರಿನಲ್ಲಿ ಲವಣಾಂಶ ಮತ್ತು ಮರಳಿನ ಅವಶೇಷಗಳ ಇಳಿಕೆಗೆ ಕಾರಣವಾಗಿದೆ. ಕೇಂದ್ರ ಸರ್ಕಾರವು ಪಶ್ಚಿಮ ಘಟ್ಟಗಳ ಮೇಲೆ ಹಸಿರು ಆರ್ಥಿಕ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮತ್ತು ದೇಶದಲ್ಲಿ ಅರಣ್ಯ ಪ್ರದೇಶವನ್ನು ಹೆಚ್ಚಿಸುತ್ತಿರುವ ಹಿನ್ನೆಲೆಯಲ್ಲಿ ಅಧ್ಯಯನವು ಪ್ರಮುಖವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

2010ರಲ್ಲಿ ಆರ್ಡರ್ ಮಾಡಿದ್ದ ನೋಕಿಯಾ ಫೋನ್ ಗಳು 16 ವರ್ಷ ಬಳಿಕ ಡೆಲಿವರಿ, ಬೇಸ್ತು ಬಿದ್ದ ಅಂಗಡಿ ಮಾಲೀಕ.. ಕಾರಣ ಯುದ್ಧ!

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

SCROLL FOR NEXT