ಸಂಗ್ರಹ ಚಿತ್ರ 
ರಾಜ್ಯ

ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್: ಚುನಾವಣೆಗೆ ತಂತ್ರರೂಪಿಸಿ ಹೋರಾಟಕ್ಕಿಳಿಯುತ್ತಿದ್ದ ಕಾಂಗ್ರೆಸ್'ಗೆ ತಿರುಗೇಟು

ಮಹದಾಯಿ ಯೋಜನೆ ಜಾರಿಗಾಗಿ ಸರ್ಕಾರದ ಮೇಲೆ ಒತ್ತರ ಹೇರಲು ಮುಂದಾಗಿದ್ದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ತಿರುಗೇಟು ನೀಡಿದೆ.

ಬೆಂಗಳೂರು: ಮಹದಾಯಿ ಯೋಜನೆ ಜಾರಿಗಾಗಿ ಸರ್ಕಾರದ ಮೇಲೆ ಒತ್ತರ ಹೇರಲು ಮುಂದಾಗಿದ್ದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ತಿರುಗೇಟು ನೀಡಿದೆ.

ಯೋಜನೆ ಜಾರಿಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಜ.2ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿತ್ತು. ಆದರೆ, ಬೆಳಗಾವಿ ಅಧಿವೇಶನದ ಕೊನೆಯ ದಿನ ಮಹದಾಯಿ ಯೋಜನೆ ಅಸ್ತು ನೀಡುವ ಮೂಲಕ ಕಾಂಗ್ರೆಸ್ಸಿಗೆ ಬಿಜೆಪಿ ಭರ್ಜರಿ ಎದಿರೇಟು ನೀಡಿದೆ.

ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ತುಂಬಾ ಕಡಿಮೆ ಹಾಗೂ ತಡವಾಗಿದೆ ಎಂದು ಹೇಳಿದೆ.

ಇದು ತುಂಬಾ ಕಡಿಮೆ, ತಡವಾಗಿದೆ ಎಂದು ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.

ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡದಾದ್ಯಂತ 59 ಲಕ್ಷ ಜನರಿಗೆ ಮಹದಾಯಿ ನದಿಯಿಂದ 3.9 ಟಿಎಂಸಿ ಅಡಿ ನೀರನ್ನು ಕಾಂಗ್ರೆಸ್ ಖಾತರಿಪಡಿಸುತ್ತದೆ ಎಂದು ಸುರ್ಜೇವಾಲಾ ಹೇಳಿದ್ದಾರೆ.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ 500 ಕೋಟಿ ರೂ.ಗಳನ್ನು ಮಂಜೂರು ಮಾಡಿ 3,000 ಕೋಟಿ ರೂ.ಗಳನ್ನು ಮಂಜೂರು ಮಾಡಿ ದಾಖಲೆ ಸಮಯದಲ್ಲಿ ಯೋಜನೆಗಳನ್ನು ಕಾರ್ಯಗತಗೊಳಿಸಲಿದೆ ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಶುಕ್ರವಾರ ವಿಜಯಪುರದಿಂದ ರಾಜ್ಯ ಪ್ರವಾಸ ಆರಂಭಿಸುತ್ತಿದ್ದು, ಸೋಮವಾರ ಹುಬ್ಬಳ್ಳಿಯಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಜ್ಯ ಪ್ರವಾಸದ ವೇಳೆ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವಲ್ಲಿ ವಿಳಂಬ ಸೇರಿದಂತೆ ಇತರೆ ವಿಚಾರಗಳ ಕುರಿತು ದನಿಯೆತ್ತಲು ಮುಂದಾಗಿದ್ದಾರೆ.

ಸಿದ್ದರಾಮಯ್ಯ ಮತ್ತು ಶಿವಕುಮಾರ್ ಡಿಸೆಂಬರ್ 30 ರಿಂದ ಜನವರಿ 29 ರವರೆಗೆ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಸಿದ್ದರಾಮಯ್ಯ ಉತ್ತರ ಕರ್ನಾಟಕದ ವಿಧಾನಸಭಾ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದರೆ, ಶಿವಕುಮಾರ್ ದಕ್ಷಿಣ ಕರ್ನಾಟಕದ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!